ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಸಿಧು ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಆಂತರಿಕ ಭಿನ್ನಮತದ ಕಾರಣಗಳಿಂದಾಗಿ ಅಮರಿಂದರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಹಾಗೂ ಸಿಧುಗೆ ಪಂಜಾಬ್ ರಾಜ್ಯ ಘಟಕದ ಹೊಣೆಗಾರಿಕೆ ನೀಡಲಾಯಿತು. ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿ, ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಸಿದ್ಧತೆ ನಡೆಸುವ ಹಂತದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.