<p><strong>ನವದೆಹಲಿ:</strong> ರಾಜ್ಯದಲ್ಲಿರುವ ಮರಾಠಾ ಸಮುದಾಯದವರೂ ಕನ್ನಡಿಗರೇ. ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಮರಾಠಾ ಸಮುದಾಯದವರು ಬೆಳಗಾವಿಯಲ್ಲಿ ಮಾತ್ರ ಇಲ್ಲ. ಅಲ್ಲದೆ, ಬೆಳಗಾವಿಯ ಮರಾಠಿಗರು ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲವನ್ನೂ ನೀಡಿದ್ದರು ಎಂದ ಅವರು, ಮರಾಠಾ ಸಮುದಾಯದಲ್ಲಿನ ಹಿಂದುಳಿದವರ ನೆರವಿಗೆ ಪ್ರಾಧಿಕಾರ ಸ್ಥಾಪಿಸಲಾಗಿದೆ ಎಂದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಗಡಿ ಸಮಸ್ಯೆ ಕುರಿತು ಮತ್ತೆ ಕ್ಯಾತೆ ತೆಗೆದಿದ್ದಾರೆ. ರಾಜ್ಯಗಳ ಗಡಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ. ಅಣ್ಣ- ತಮ್ಮಂದಿರಂತೆ ಇರುವ ಮರಾಠಾ ಮತ್ತು ಕನ್ನಡಿಗರ ನಡುವೆ ದ್ವೇಷ ಭಾವ ಹುಟ್ಟು ಹಾಕುವುದನ್ನು ಸಹಿಸಲಾಗದು ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತು ಚರ್ಚಿಸಲು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು. ಅವರೊಂದಿಗಿನ ಭೇಟಿಯ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.</p>.<p>ಡಿಸೆಂಬರ್ 7ರಿಂದ ವಿಧಾನ ಮಂಡಲ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯದಲ್ಲಿರುವ ಮರಾಠಾ ಸಮುದಾಯದವರೂ ಕನ್ನಡಿಗರೇ. ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.</p>.<p>ಮರಾಠಾ ಸಮುದಾಯದವರು ಬೆಳಗಾವಿಯಲ್ಲಿ ಮಾತ್ರ ಇಲ್ಲ. ಅಲ್ಲದೆ, ಬೆಳಗಾವಿಯ ಮರಾಠಿಗರು ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲವನ್ನೂ ನೀಡಿದ್ದರು ಎಂದ ಅವರು, ಮರಾಠಾ ಸಮುದಾಯದಲ್ಲಿನ ಹಿಂದುಳಿದವರ ನೆರವಿಗೆ ಪ್ರಾಧಿಕಾರ ಸ್ಥಾಪಿಸಲಾಗಿದೆ ಎಂದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಗಡಿ ಸಮಸ್ಯೆ ಕುರಿತು ಮತ್ತೆ ಕ್ಯಾತೆ ತೆಗೆದಿದ್ದಾರೆ. ರಾಜ್ಯಗಳ ಗಡಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ. ಅಣ್ಣ- ತಮ್ಮಂದಿರಂತೆ ಇರುವ ಮರಾಠಾ ಮತ್ತು ಕನ್ನಡಿಗರ ನಡುವೆ ದ್ವೇಷ ಭಾವ ಹುಟ್ಟು ಹಾಕುವುದನ್ನು ಸಹಿಸಲಾಗದು ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಕುರಿತು ಚರ್ಚಿಸಲು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು. ಅವರೊಂದಿಗಿನ ಭೇಟಿಯ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.</p>.<p>ಡಿಸೆಂಬರ್ 7ರಿಂದ ವಿಧಾನ ಮಂಡಲ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>