<p><strong>ನವದೆಹಲಿ</strong>: ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಂಗಳವಾರ ಲೋಕಸಭೆಯಲ್ಲಿ ಹೇಳಿದರು.</p>.<p>ಉಕ್ರೇನ್ ವಿದ್ಯಮಾನಗಳ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ‘ಭಾರತದ ಪ್ರದೇಶವನ್ನು ಸ್ವಲ್ಪ–ಸ್ವಲ್ಪವಾಗಿ ಚೀನಾಕ್ಕೆ ಬಿಟ್ಟು ಕೊಡಲಾಗುತ್ತಿದೆ’ ಎಂದು ಬಿಎಸ್ಪಿ ಸಂಸದ ಶ್ಯಾಮಸಿಂಗ್ ಯಾದವ್ ಹೇಳಿದರು.</p>.<p>ಆಗ ಮಧ್ಯಪ್ರವೇಶಿಸಿದ ಸಚಿವ ರಿಜಿಜು, ‘ಕೆಲ ಪ್ರದೇಶಗಳು ಈಗಲೂ ಚೀನಾ ಹಾಗೂ ಪಾಕಿಸ್ತಾನದ ವಶದಲ್ಲಿವೆ. ಈ ಪ್ರದೇಶಗಳು ಅತಿಕ್ರಮಣಗೊಳ್ಳಲು ಕಾರಣರಾದವರ ಹೆಸರುಗಳನ್ನು ಪ್ರಸ್ತಾಪಿಸುವುದಿಲ್ಲ. ಆದರೆ, ಮೋದಿ ಅವರು ಪ್ರಧಾನಿಯಾದ ನಂತರ ಒಂದು ಇಂಚೂ ಪ್ರದೇಶವನ್ನು ಸಹ ಬಿಟ್ಟುಕೊಟ್ಟಿಲ್ಲ’ ಎಂದು ತಿರುಗೇಟು ನೀಡಿದರು.</p>.<p>ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲಪ್ರದೇಶ ಶೇ 100ರಷ್ಟು ಸುರಕ್ಷಿತ ಹಾಗೂ ಭದ್ರವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಂಗಳವಾರ ಲೋಕಸಭೆಯಲ್ಲಿ ಹೇಳಿದರು.</p>.<p>ಉಕ್ರೇನ್ ವಿದ್ಯಮಾನಗಳ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ‘ಭಾರತದ ಪ್ರದೇಶವನ್ನು ಸ್ವಲ್ಪ–ಸ್ವಲ್ಪವಾಗಿ ಚೀನಾಕ್ಕೆ ಬಿಟ್ಟು ಕೊಡಲಾಗುತ್ತಿದೆ’ ಎಂದು ಬಿಎಸ್ಪಿ ಸಂಸದ ಶ್ಯಾಮಸಿಂಗ್ ಯಾದವ್ ಹೇಳಿದರು.</p>.<p>ಆಗ ಮಧ್ಯಪ್ರವೇಶಿಸಿದ ಸಚಿವ ರಿಜಿಜು, ‘ಕೆಲ ಪ್ರದೇಶಗಳು ಈಗಲೂ ಚೀನಾ ಹಾಗೂ ಪಾಕಿಸ್ತಾನದ ವಶದಲ್ಲಿವೆ. ಈ ಪ್ರದೇಶಗಳು ಅತಿಕ್ರಮಣಗೊಳ್ಳಲು ಕಾರಣರಾದವರ ಹೆಸರುಗಳನ್ನು ಪ್ರಸ್ತಾಪಿಸುವುದಿಲ್ಲ. ಆದರೆ, ಮೋದಿ ಅವರು ಪ್ರಧಾನಿಯಾದ ನಂತರ ಒಂದು ಇಂಚೂ ಪ್ರದೇಶವನ್ನು ಸಹ ಬಿಟ್ಟುಕೊಟ್ಟಿಲ್ಲ’ ಎಂದು ತಿರುಗೇಟು ನೀಡಿದರು.</p>.<p>ಚೀನಾ ಗಡಿಗೆ ಹೊಂದಿಕೊಂಡಿರುವ ಅರುಣಾಚಲಪ್ರದೇಶ ಶೇ 100ರಷ್ಟು ಸುರಕ್ಷಿತ ಹಾಗೂ ಭದ್ರವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>