ಲೋಕಸಭೆಯನ್ನುದ್ದೇಶಿಸಿ ಮೋದಿ ಭಾಷಣ ಮಾಡಿದಾಗ,ಖರ್ಗೆಯವರ ಈ ಮಾತನ್ನು ಖಂಡಿಸಿದ್ದರು. ಭಾರತದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್, ಚಂದ್ರ ಶೇಖರ್ ಆಜಾದ್ ಅವರು ಮಾಡಿದ ತ್ಯಾಗಗಳನ್ನು ಕಾಂಗ್ರೆಸ್ ಹೇಳುವುದೇ ಇಲ್ಲ. ಬರೀ ಒಂದೇ ಒಂದು ಕುಟುಂಬ ನಮಗೆ ಸ್ವಾತಂತ್ರ್ಯ ತಂದುಕೊಟ್ಟಿದೆ ಎಂದು ಅಂದುಕೊಂಡಿದ್ದಾರೆ ಎಂದಿದ್ದರು ಮೋದಿ.
ಫೈಜ್ಪುರ್ನಲ್ಲಿ 1936ರಲ್ಲಿ ಕಾಂಗ್ರೆಸ್ ಮೊದಲ ಬಾರಿ ಸಮಾವೇಶವೇರ್ಪಡಿಸಿತ್ತು.ಆ ಸಮಾವೇಶದಲ್ಲಿ ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು.