<p class="title"><strong>ನವದೆಹಲಿ:</strong> ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು (ಯುಪಿಎಸ್ಸಿ) ಎದುರಿಸಲು ಪ್ರಸ್ತುತ ಇರುವ ಒಟ್ಟು ಪ್ರಯತ್ನಗಳ ಸಂಖ್ಯೆಯನ್ನು ಬದಲಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p class="title">ವಯೋಮಿತಿ ಸಡಿಲಿಕೆ ಅವಕಾಶ ಪಡೆದ ಅಭ್ಯರ್ಥಿಗಳಿಗೆ ಅನುಕಂಪದ ದೃಷ್ಟಿಯಿಂದ ಪರೀಕ್ಷೆಗೆ ಹೆಚ್ಚುವರಿ ಅವಕಾಶವನ್ನು ಕಲ್ಪಿಸುವುದನ್ನು ಪರಿಗಣಿಸಬೇಕು ಎಂದು ಸಂಸದೀಯ ಸಮಿತಿಯು ಮಾರ್ಚ್ 24ರಂದು ಸಲಹೆ ನೀಡಿತ್ತು.</p>.<p class="title">ಲೋಕಸಭೆಯಲ್ಲಿ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಕುರಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು, ಕೋವಿಡ್ ಕಾರಣದಿಂದಲೂ ಆಕಾಂಕ್ಷಿಗಳು ಹೆಚ್ಚುವರಿ ಅವಕಾಶ ಕೋರಿದ್ದರು. ಕೆಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು ಎಂಬುದನ್ನು ಉಲ್ಲೇಖಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಈ ಸಂಬಂಧ ನೀಡಿದ ತೀರ್ಪುಗಳ ಆಧಾರದಲ್ಲಿ ಮನವಿಗಳನ್ನು ಪರಿಶೀಲಿಸಲಾಗಿದೆ. ಯುಪಿಎಸ್ಸಿ ಪರೀಕ್ಷೆಗೆ ಈಗ ಇರುವ ಅವಕಾಶಗಳ ಸಂಖ್ಯೆ ಪರಿಷ್ಕರಿಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.</p>.<p>ಐಪಿಎಸ್, ಐಎಎಸ್ ಮತ್ತು ಐಎಫ್ಎಸ್ ವೃಂದದ ಅಧಿಕಾರಿಗಳ ಆಯ್ಕೆಗೆ ಯುಪಿಎಸ್ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸುತ್ತಿದೆ. ಪೂರ್ವಭಾವಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಎಂದು ಮೂರು ಹಂತದಲ್ಲಿ ಈ ಪರೀಕ್ಷೆಯು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೇಂದ್ರ ನಾಗರಿಕ ಸೇವಾ ಪರೀಕ್ಷೆಗಳನ್ನು (ಯುಪಿಎಸ್ಸಿ) ಎದುರಿಸಲು ಪ್ರಸ್ತುತ ಇರುವ ಒಟ್ಟು ಪ್ರಯತ್ನಗಳ ಸಂಖ್ಯೆಯನ್ನು ಬದಲಿಸುವುದು ಸೂಕ್ತವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p class="title">ವಯೋಮಿತಿ ಸಡಿಲಿಕೆ ಅವಕಾಶ ಪಡೆದ ಅಭ್ಯರ್ಥಿಗಳಿಗೆ ಅನುಕಂಪದ ದೃಷ್ಟಿಯಿಂದ ಪರೀಕ್ಷೆಗೆ ಹೆಚ್ಚುವರಿ ಅವಕಾಶವನ್ನು ಕಲ್ಪಿಸುವುದನ್ನು ಪರಿಗಣಿಸಬೇಕು ಎಂದು ಸಂಸದೀಯ ಸಮಿತಿಯು ಮಾರ್ಚ್ 24ರಂದು ಸಲಹೆ ನೀಡಿತ್ತು.</p>.<p class="title">ಲೋಕಸಭೆಯಲ್ಲಿ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಕುರಿತ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದು, ಕೋವಿಡ್ ಕಾರಣದಿಂದಲೂ ಆಕಾಂಕ್ಷಿಗಳು ಹೆಚ್ಚುವರಿ ಅವಕಾಶ ಕೋರಿದ್ದರು. ಕೆಲವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು ಎಂಬುದನ್ನು ಉಲ್ಲೇಖಿಸಿದ್ದಾರೆ.</p>.<p>ಸುಪ್ರೀಂ ಕೋರ್ಟ್ ಈ ಸಂಬಂಧ ನೀಡಿದ ತೀರ್ಪುಗಳ ಆಧಾರದಲ್ಲಿ ಮನವಿಗಳನ್ನು ಪರಿಶೀಲಿಸಲಾಗಿದೆ. ಯುಪಿಎಸ್ಸಿ ಪರೀಕ್ಷೆಗೆ ಈಗ ಇರುವ ಅವಕಾಶಗಳ ಸಂಖ್ಯೆ ಪರಿಷ್ಕರಿಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.</p>.<p>ಐಪಿಎಸ್, ಐಎಎಸ್ ಮತ್ತು ಐಎಫ್ಎಸ್ ವೃಂದದ ಅಧಿಕಾರಿಗಳ ಆಯ್ಕೆಗೆ ಯುಪಿಎಸ್ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸುತ್ತಿದೆ. ಪೂರ್ವಭಾವಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಎಂದು ಮೂರು ಹಂತದಲ್ಲಿ ಈ ಪರೀಕ್ಷೆಯು ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>