ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರೀಯ ನಾಯಕತ್ವದಲ್ಲಿ ಬದಲಾವಣೆಯ ಅಗತ್ಯವಿದೆ. ಅಭಿವೃದ್ಧಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳೆಂದು ಕರೆಯಲ್ಪಡುವ (ಕಾಂಗ್ರೆಸ್, ಬಿಜೆಪಿ) ಎರಡೂ ಪಕ್ಷಗಳು ವಿಫಲವಾಗಿವೆ. ವಾಸ್ತವವಾಗಿ ನಮಗೆ ಹೊಸ ಸಂವಿಧಾನದ ಅಗತ್ಯವಿದೆ. ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟದ ಹಾದಿಯಲ್ಲಿ ಕೆಲಸ ಮಾಡಲು ವಿಫಲವಾಗಿರುವುದರಿಂದ ಚರ್ಚೆಯ ಅಗತ್ಯವಿದೆ’ ಎಂದರು.