ಮಮತಾ ಬ್ಯಾನರ್ಜಿಯವರ ಹೇಳಿಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರಿಗೆ ‘ನಮಸ್ಕಾರ‘ ಅಥವಾ ‘ಜೈ ಶ್ರೀರಾಮ್‘ ಎನ್ನುವುದನ್ನು ಒಂದು ಸಂಪ್ರದಾಯ ಮತ್ತು ಶಿಷ್ಟಾಚಾರವಾಗಿ ಪಾಲಿಸುತ್ತಾರೆ. ಹಾಗಾಗಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಬಗ್ಗೆ ಯಾವುದೇ ಕೆಟ್ಟ ಭಾವನೆ ಹೊಂದಬೇಕಿಲ್ಲ. ನಾವೂ ಯಾರಿಗೂ ಈ ಘೋಷಣೆ ಕೂಗಬೇಕೆಂದು ಒತ್ತಡ ಹೇರುವುದಿಲ್ಲ‘ ಎಂದು ಹೇಳಿದರು.