<p><strong>ನವದೆಹಲಿ</strong>: ನ್ಯಾಷನಲ್ ಹೆರಾಲ್ಡ್ನ ಪ್ರಕರಣದಲ್ಲಿ ಸ್ಥಿರಾಸ್ತಿಯನ್ನು ತನ್ನ ಸುಪರ್ದಿಗೆ ಪಡೆಯಲು ನೋಟಿಸ್ ಜಾರಿಗೊಳಿಸಿರುವ ಕ್ರಮವನ್ನು ‘ಪ್ರಜಾಪ್ರಭುತ್ವದ ಮೇಲಿನ ಹಲ್ಲೆ’ ಎಂದು ರಾಜ್ಯಸಭೆ ಸದಸ್ಯ ಕಪಿಲ್ ಸಿಬಲ್ ಅವರು ಟೀಕಿಸಿದ್ದಾರೆ. </p>.<p>ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸಲು ಆಡಳಿತರೂಢ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖಂಡರಾದ ಅವರು ಭಾನುವಾರ ಆರೋಪಿಸಿದರು. </p>.<p>‘ಹೇಳಿಕೊಳ್ಳಲು ನಮ್ಮದು ಪ್ರಜಾಪ್ರಭುತ್ವದ ತಾಯಿ. ವಾಸ್ತವದಲ್ಲಿ ಅದು ನಿರಂಕುಶಾಡಳಿತದ ತಂದೆಯಂತೆ ಕಾಣುತ್ತಿದೆ. ಪ್ರತಿಪಕ್ಷಗಳನ್ನು ಹಕ್ಕಿಕ್ಕಲು ಬಿಜೆಪಿ ಹಿಂದೂ–ಮುಸ್ಲಿಂ ರಾಜಕಾರಣದ ಕಾರ್ಯಸೂಚಿ ಹೊಂದಿದೆ’ ಎಂದರು.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಮತ್ತು ಅಸೋಸಿಯೇಟೆಡ್ ಜನರಲ್ ಲಿಮಿಟೆಡ್ಗೆ (ಎಜೆಎಲ್) ಸೇರಿದ ₹661 ಕೋಟಿ ಮೌಲ್ಯದ ಆಸ್ತಿ ಸುಪರ್ದಿಗೆ ಪಡೆಯಲು ಇ.ಡಿ ನೋಟಿಸ್ ಜಾರಿ ಮಾಡಿದ್ದನ್ನು ಉಲ್ಲೇಖಿಸಿ ಈ ಟೀಕೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನ್ಯಾಷನಲ್ ಹೆರಾಲ್ಡ್ನ ಪ್ರಕರಣದಲ್ಲಿ ಸ್ಥಿರಾಸ್ತಿಯನ್ನು ತನ್ನ ಸುಪರ್ದಿಗೆ ಪಡೆಯಲು ನೋಟಿಸ್ ಜಾರಿಗೊಳಿಸಿರುವ ಕ್ರಮವನ್ನು ‘ಪ್ರಜಾಪ್ರಭುತ್ವದ ಮೇಲಿನ ಹಲ್ಲೆ’ ಎಂದು ರಾಜ್ಯಸಭೆ ಸದಸ್ಯ ಕಪಿಲ್ ಸಿಬಲ್ ಅವರು ಟೀಕಿಸಿದ್ದಾರೆ. </p>.<p>ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸಲು ಆಡಳಿತರೂಢ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖಂಡರಾದ ಅವರು ಭಾನುವಾರ ಆರೋಪಿಸಿದರು. </p>.<p>‘ಹೇಳಿಕೊಳ್ಳಲು ನಮ್ಮದು ಪ್ರಜಾಪ್ರಭುತ್ವದ ತಾಯಿ. ವಾಸ್ತವದಲ್ಲಿ ಅದು ನಿರಂಕುಶಾಡಳಿತದ ತಂದೆಯಂತೆ ಕಾಣುತ್ತಿದೆ. ಪ್ರತಿಪಕ್ಷಗಳನ್ನು ಹಕ್ಕಿಕ್ಕಲು ಬಿಜೆಪಿ ಹಿಂದೂ–ಮುಸ್ಲಿಂ ರಾಜಕಾರಣದ ಕಾರ್ಯಸೂಚಿ ಹೊಂದಿದೆ’ ಎಂದರು.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಮತ್ತು ಅಸೋಸಿಯೇಟೆಡ್ ಜನರಲ್ ಲಿಮಿಟೆಡ್ಗೆ (ಎಜೆಎಲ್) ಸೇರಿದ ₹661 ಕೋಟಿ ಮೌಲ್ಯದ ಆಸ್ತಿ ಸುಪರ್ದಿಗೆ ಪಡೆಯಲು ಇ.ಡಿ ನೋಟಿಸ್ ಜಾರಿ ಮಾಡಿದ್ದನ್ನು ಉಲ್ಲೇಖಿಸಿ ಈ ಟೀಕೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>