‘ಸಿಬ್ಬಂದಿ ಮತ್ತು ಗ್ರಾಹಕರನ್ನು ತಪಾಸಣೆಗೆ ಒಳಪಡಿಸಬೇಕು. ಕೆಮ್ಮು, ಶೀತ ಮತ್ತು ಜ್ವರದ ಲಕ್ಷಣ ಕಂಡು ಬಂದರೆ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಅವರನ್ನು ಕಳುಹಿಸಬೇಕು. ಹೋಟೆಲ್ ಮತ್ತು ರೆಸ್ಟೊರೆಂಟ್ಗಳನ್ನು ಸ್ವಚ್ಛವಾಗಿ ಇರಿಸಬೇಕು, ವೈರಸ್ ನಿರೋಧಕಗಳನ್ನುನಿಯಮಿತವಾಗಿ ಸಿಂಪಡಿಸಬೇಕು’ ಎಂದು ಒಕ್ಕೂಟದ ಜಂಟಿ ಗೌರವ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಹೇಳಿದ್ದಾರೆ.