ಕಸ್ಟಮ್ಸ್ ಕಾಯ್ದೆ, ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಅಂಶಗಳ ವ್ಯಾಖ್ಯಾನಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂ.ಎಂ. ಸುಂದರೇಶ್ ಮತ್ತು ಬೇಲಾ ಎಂ. ತ್ರಿವೇದಿ ಅವರು ಇದ್ದ ತ್ರಿಸದಸ್ಯ ಪೀಠವು ತೀರ್ಪು ಕಾಯ್ದಿರಿಸಿದೆ. ಬಂಧಿಸುವ ಅಧಿಕಾರ ಹಾಗೂ ಬಂಧನದ ಅವಶ್ಯಕತೆ ಬೇರೆ ಬೇರೆ ಎಂದು ಪೀಠವು ಹೇಳಿದೆ.