ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಅದು ಕೇವಲ ಶೌಚಾಲಯದ ವಿರಾಮವಾಗಿತ್ತು.ನಾನು ಬೆಳಿಗ್ಗೆಯಿಂದ ವೇದಿಕೆ ಮೇಲೆ ಕುಳಿತಿದ್ದೆ. ಶೌಚಾಲಯಕ್ಕೆ ಹೋಗಬೇಕು ಅನಿಸುವುದು ಸಾಮಾನ್ಯ ವಿಷಯ. ಆದರೆ ಮಾಧ್ಯಮಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿವೆ. ಪಕ್ಷ ನನ್ನನ್ನು ಯಾವತ್ತೂ ಕಡೆಗಣಿಸಿಲ್ಲ. ಪಕ್ಷದ ನಾಯಕತ್ವದ ಜೊತೆ ನನಗೆ ಅಸಮಾಧಾನವೂ ಇಲ್ಲ. ಪಕ್ಷ ನನಗೆ ಪ್ರಮುಖ ಹುದ್ದೆಗಳನ್ನು ನೀಡಿದೆ. ನನ್ನನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನನ್ನಾಗಿ ಮಾಡಿದೆ’ ಎಂದು ಅವರು ಹೇಳಿದರು.