<p class="title"><strong>ಕೊಟ್ಟಾಯಂ</strong>: ಖ್ಯಾತ ಶಿಕ್ಷಣ ತಜ್ಞೆ, ಸಾಮಾಜಿಕ ಕಾರ್ಯಕರ್ತೆ ಮೇರಿ ರಾಯ್ (89) ಅವರು ವಯೋಸಹಜ ಕಾಯಿಲೆಗಳಿಂದ ಗುರುವಾರ ನಿಧನರಾದರು.</p>.<p class="title">ಅವರಿಗೆ ಮಗಳು, ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಮತ್ತು ಮಗ ಲಲಿತ್ ರಾಯ್ ಇದ್ದಾರೆ. ಮೇರಿ ಅವರು ಪಲ್ಲಿಕೂಡಂ ಶಾಲೆಯ ಸ್ಥಾಪಕರೂ ಹೌದು.</p>.<p>ಕೊಟ್ಟಾಯಂ ಸಮೀಪದ ಐಮನಂ ಗ್ರಾಮದಲ್ಲಿ 1933ರಲ್ಲಿ ಜನಿಸಿದ ಮೇರಿ ಅವರು ದೆಹಲಿಯಲ್ಲಿ ಶಾಲಾ ಶಿಕ್ಷಣ ಹಾಗೂ ಚೆನ್ನೈನಲ್ಲಿ ಕಾಲೇಜು ಪದವಿ ಪಡೆದರು. ಬಳಿಕ ಕೋಲ್ಕತ್ತದ ಕಂಪನಿಯೊಂದರಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾಗ ಅವರು ರಾಜೀಬ್ ರಾಯ್ ಅವರನ್ನು ವಿವಾಹವಾದರು.</p>.<p>1980ರಲ್ಲಿ ಕೇರಳದ ಸಿರಿಯನ್ ಕ್ರಿಶ್ಚಿಯನ್ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಲಿಂಗ ಸಮಾನತೆಯನ್ನು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇರಿ ಅವರು ಕಾನೂನು ಹೋರಾಟವನ್ನು ಪ್ರಾರಂಭಿಸಿದರು. 1986ರಲ್ಲಿ ಕೋರ್ಟ್ ಇವರ ಮನವಿಯನ್ನು ಪುರಸ್ಕರಿಸಿತು.</p>.<p>ತಿರುವಾಂಕೂರು ರಾಜಪ್ರಭುತ್ವದ 1916ರ ತಿರುವಾಂಕೂರ್ ಉತ್ತರಾಧಿಕಾರ ಕಾಯ್ದೆಯಲ್ಲಿನ ನಿಬಂಧನೆಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಮಹಿಳೆಯರಿಗೂ ಅವರ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ತೀರ್ಪು ನೀಡಿತ್ತು.</p>.<p>ಮೇರಿ ಅವರ ಪಾರ್ಥಿವ ಶರೀರವನ್ನು ಪಲ್ಲಿಕೂಡಂ ಕ್ಯಾಂಪಸ್ನಲ್ಲಿರುವ ಅವರ ನಿವಾಸದಲ್ಲಿ ಸೆ. 2ರ ಮಧ್ಯಾಹ್ನದ ತನಕ ಸಾರ್ವಜನಿಕ ವೀಕ್ಷಣೆ ಇರಿಸಲಾಗುವುದು. ಬಳಿಕ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಟ್ಟಾಯಂ</strong>: ಖ್ಯಾತ ಶಿಕ್ಷಣ ತಜ್ಞೆ, ಸಾಮಾಜಿಕ ಕಾರ್ಯಕರ್ತೆ ಮೇರಿ ರಾಯ್ (89) ಅವರು ವಯೋಸಹಜ ಕಾಯಿಲೆಗಳಿಂದ ಗುರುವಾರ ನಿಧನರಾದರು.</p>.<p class="title">ಅವರಿಗೆ ಮಗಳು, ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಮತ್ತು ಮಗ ಲಲಿತ್ ರಾಯ್ ಇದ್ದಾರೆ. ಮೇರಿ ಅವರು ಪಲ್ಲಿಕೂಡಂ ಶಾಲೆಯ ಸ್ಥಾಪಕರೂ ಹೌದು.</p>.<p>ಕೊಟ್ಟಾಯಂ ಸಮೀಪದ ಐಮನಂ ಗ್ರಾಮದಲ್ಲಿ 1933ರಲ್ಲಿ ಜನಿಸಿದ ಮೇರಿ ಅವರು ದೆಹಲಿಯಲ್ಲಿ ಶಾಲಾ ಶಿಕ್ಷಣ ಹಾಗೂ ಚೆನ್ನೈನಲ್ಲಿ ಕಾಲೇಜು ಪದವಿ ಪಡೆದರು. ಬಳಿಕ ಕೋಲ್ಕತ್ತದ ಕಂಪನಿಯೊಂದರಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾಗ ಅವರು ರಾಜೀಬ್ ರಾಯ್ ಅವರನ್ನು ವಿವಾಹವಾದರು.</p>.<p>1980ರಲ್ಲಿ ಕೇರಳದ ಸಿರಿಯನ್ ಕ್ರಿಶ್ಚಿಯನ್ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಲಿಂಗ ಸಮಾನತೆಯನ್ನು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇರಿ ಅವರು ಕಾನೂನು ಹೋರಾಟವನ್ನು ಪ್ರಾರಂಭಿಸಿದರು. 1986ರಲ್ಲಿ ಕೋರ್ಟ್ ಇವರ ಮನವಿಯನ್ನು ಪುರಸ್ಕರಿಸಿತು.</p>.<p>ತಿರುವಾಂಕೂರು ರಾಜಪ್ರಭುತ್ವದ 1916ರ ತಿರುವಾಂಕೂರ್ ಉತ್ತರಾಧಿಕಾರ ಕಾಯ್ದೆಯಲ್ಲಿನ ನಿಬಂಧನೆಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಮಹಿಳೆಯರಿಗೂ ಅವರ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ತೀರ್ಪು ನೀಡಿತ್ತು.</p>.<p>ಮೇರಿ ಅವರ ಪಾರ್ಥಿವ ಶರೀರವನ್ನು ಪಲ್ಲಿಕೂಡಂ ಕ್ಯಾಂಪಸ್ನಲ್ಲಿರುವ ಅವರ ನಿವಾಸದಲ್ಲಿ ಸೆ. 2ರ ಮಧ್ಯಾಹ್ನದ ತನಕ ಸಾರ್ವಜನಿಕ ವೀಕ್ಷಣೆ ಇರಿಸಲಾಗುವುದು. ಬಳಿಕ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>