ನವದೆಹಲಿ: ದೆಹಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಕೇಜ್ರಿವಾಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ದೆಹಲಿಗರೇ ಎದ್ದೇಳಿ... ಯಾವುದೂ ಉಚಿತವಾಗಿಲ್ಲ..' ಎಂದು ಟ್ವೀಟ್ ಮಾಡಿದ್ದಾರೆ.
ಎರಡು ದಿನದಿಂದ ಸುರಿಯುತ್ತಿರುವ ಮಳೆಗೆ ಇಡೀ ದೆಹಲಿಯೇ ಮುಳುಗಿದೆ. ಯಮುನಾ ನದಿ ಒಳಹರಿವು ಗರಿಷ್ಠಮಟ್ಟಕೇರಿದೆ. ರಸ್ತೆ, ಮನೆ ಸೇರಿದಂತೆ ಎಲ್ಲ ಮೂಲಸೌಕರ್ಯಗಳು ಪ್ರವಾಹದಲ್ಲಿ ಮುಳುಗಿವೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಸರ್ಕಾರ ಹರಸಾಹಸಪಡುತ್ತಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಂಸದ ಗೌತಮ್ ಗಂಭೀರ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ದೆಹಲಿಗರೇ ಎಚ್ಚೆತ್ತುಕೊಳ್ಳಿ.... ದೆಹಲಿ ಗಟಾರವಾಗಿ ಮಾರ್ಪಟ್ಟಿದೆ.... ಯಾವುದೂ ಉಚಿತವಾಗಿಲ್ಲ.... ಇದೇ ನಿಜವಾದ ಬೆಲೆ....‘ ಎಂದು ದೆಹಲಿ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.