ಕಾಂಗ್ರೆಸ್ಗೆ ವಂಶಾಡಳಿತ ಮತ್ತು ಭ್ರಷ್ಟಾಚಾರಕ್ಕಿಂತ ಬೇರೆ ಯಾವ ವಿಷಯವೂ ಮುಖ್ಯವಲ್ಲ ಎಂದು ಆರೋಪಿಸಿದ ಅವರು, ದಲಿತರ ಮೇಲಿನ ದೌರ್ಜನ್ಯದ ಘಟನೆಗಳ ಬಗ್ಗೆ ಆ ಪಕ್ಷ ಕಣ್ಣುಮುಚ್ಚಿ ಕುಳಿತಿದೆ. ರಾಜಸ್ಥಾನ ಸರ್ಕಾರ ತುಷ್ಟೀಕರಣ ಹೊರತುಪಡಿಸಿ ಬೇರೇನೂ ಯೋಚಿಸುವುದಿಲ್ಲ. ಈ ನೀತಿಯಿಂದಾಗಿ, ಗಲಭೆ ಮತ್ತು ಭಯೋತ್ಪಾದನೆಯ ಮನಸ್ಥಿತಿ ಹೊಂದಿರುವವರು ಐದು ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದರು ಎಂದು ಹೇಳಿದರು.