ಇದಕ್ಕೆ ಪ್ರತಿಕ್ರಿಯಿಸಿರುವ ರಾಮಕೇಷ್ಣ ರೆಡ್ಡಿ, ‘ಇದು ಟಿಡಿಪಿಯ ಮತ್ತೊಂದು ಮಾರ್ಗವಾಗಿದೆ. ಟಿಡಿಪಿ ಆಡಳಿತದಲ್ಲಿ ಪೊಲೀಸರು ರಾಜಕೀಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯದ ವಿಶೇಷ ಸ್ಥಾನಕ್ಕಾಗಿ ಆಗ್ರಹಿಸಿ ವಿಶಾಖಪಟ್ಟಣಂನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಭೇಟಿಯಾಗಲು ತೆರಳಿದ್ದ ಆಗಿನ ವಿರೋಧ ಪಕ್ಷದ ನಾಯಕ ಜಗನ್ಮೋಹನ್ ರೆಡ್ಡಿ ಅವರನ್ನು ಪೊಲೀಸರು ತಡೆದಿದ್ದರು. ಟಿಡಿಪಿ ಆಡಳಿತವಿದ್ದಾಗ ಅರಾಜಕತೆ ಚಾಲ್ತಿಯಲ್ಲಿತ್ತು. ಆದರೆ ಈಗ ವೈಎಸ್ಆರ್ಸಿಪಿ ಆಡಳಿತದಲ್ಲಿ ಪೊಲೀಸರ ಕರ್ತವ್ಯ ನಿರ್ವಹಣೆಗೆ ಯಾವುದೇ ಹಸ್ತಕ್ಷೇಪಗಳಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.