<p><strong>ನವದೆಹಲಿ</strong>: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ, ನಿತೀಶ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಿತೀಶ್ ಕುಮಾರ್ ಅವರ ನಡೆಯಲ್ಲಿ ಆಕ್ಷೇಪಾರ್ಹವಾದದ್ದೇನೂ ಇಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗೆಯೇ ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿರುವವರು ರಾಷ್ಟ್ರಗೀತೆಯನ್ನು ಹೇಗೆ ಗೌರವಿಸಬೇಕೆಂದು ಅವರಿಗೆ ಕಲಿಸಬೇಕಾದ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.</p><p>‘ನಿತೀಶ್ ಕುಮಾರ್ 20 ವರ್ಷ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅಧಿಕಾರಾವಧಿಯು ಉತ್ತಮ ಆಡಳಿತದಿಂದ ಗುರುತಿಸಲ್ಪಟ್ಟಿದೆ. ಹಾಗೆಯೇ ಅವರ ಕುಶಾಗ್ರಮತಿ ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿದೆ. ಈ ವರ್ಷಾಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ನಿತೀಶ್ ನೇತೃತ್ವದಲ್ಲಿ ಮತ್ತೊಮ್ಮೆ ಎನ್ಡಿಎ ಕೂಟ ಅಧಿಕಾರಕ್ಕೆ ಬರಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>ಆರ್ಜೆಡಿ ನಾಯಕ ತೇಜಸ್ವಿ ಯಾದವ್ ನಿಜವಾದ ಖಳನಾಯಕ. ಹತಾಶೆಯಿಂದ ನಿತೀಶ್ ಕುಮಾರ್ ಬಗ್ಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ಮಾಂಝಿ ವಾಗ್ದಾಳಿ ನಡೆಸಿದ್ದಾರೆ. </p><p>ಪಟ್ನಾದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಿತೀಶ್ ಕುಮಾರ್ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪಿಸಿ ನಿತೀಶ್ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು. </p><p><strong>ನಿತೀಶ್ ನಡೆ ಖಂಡಿಸಿದ ಯಾದವ್:</strong> ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಬಿಹಾರಿ ಆಗಿ ಅವರು ಮಾಡಿದ ಕೆಲಸದಿಂದ ನನಗೆ ನಾಚಿಕೆಯಾಗುತ್ತಿದೆ. ಮುಖ್ಯಮಂತ್ರಿ ರಾಜ್ಯದ ನಾಯಕರು, ನಿನ್ನೆಯ ಘಟನೆ ದುರದೃಷ್ಟಕರ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆಕ್ರೋಶ ಹೊರಹಾಕಿದ್ದರು. </p><p>‘ಭಾರತದ ರಾಜಕೀಯದ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರಗೀತೆಯನ್ನು ಅಗೌರವಿಸಿದ ಮೊದಲ ಘಟನೆ ಇದು. ನಿತೀಶ್ ಕುಮಾರ್ ರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು’ ಎಂದು ಅವರು ಆಗ್ರಹಿಸಿದ್ದರು.</p>.ರಾಷ್ಟ್ರಗೀತೆ ವೇಳೆ ಮಾತನಾಡುತ್ತಾ ನಿಂತಿದ್ದ ನಿತೀಶ್ ನಿವೃತ್ತಿ ಪಡೆಯಲಿ: ತೇಜಸ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ, ನಿತೀಶ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. </p><p>ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ನಿತೀಶ್ ಕುಮಾರ್ ಅವರ ನಡೆಯಲ್ಲಿ ಆಕ್ಷೇಪಾರ್ಹವಾದದ್ದೇನೂ ಇಲ್ಲ, ಅವರು ಯಾವುದೇ ತಪ್ಪು ಮಾಡಿಲ್ಲ. ಹಾಗೆಯೇ ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿರುವವರು ರಾಷ್ಟ್ರಗೀತೆಯನ್ನು ಹೇಗೆ ಗೌರವಿಸಬೇಕೆಂದು ಅವರಿಗೆ ಕಲಿಸಬೇಕಾದ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.</p><p>‘ನಿತೀಶ್ ಕುಮಾರ್ 20 ವರ್ಷ ಬಿಹಾರದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅಧಿಕಾರಾವಧಿಯು ಉತ್ತಮ ಆಡಳಿತದಿಂದ ಗುರುತಿಸಲ್ಪಟ್ಟಿದೆ. ಹಾಗೆಯೇ ಅವರ ಕುಶಾಗ್ರಮತಿ ಪ್ರಪಂಚದಾದ್ಯಂತ ಮೆಚ್ಚುಗೆ ಗಳಿಸಿದೆ. ಈ ವರ್ಷಾಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ನಿತೀಶ್ ನೇತೃತ್ವದಲ್ಲಿ ಮತ್ತೊಮ್ಮೆ ಎನ್ಡಿಎ ಕೂಟ ಅಧಿಕಾರಕ್ಕೆ ಬರಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. </p><p>ಆರ್ಜೆಡಿ ನಾಯಕ ತೇಜಸ್ವಿ ಯಾದವ್ ನಿಜವಾದ ಖಳನಾಯಕ. ಹತಾಶೆಯಿಂದ ನಿತೀಶ್ ಕುಮಾರ್ ಬಗ್ಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ ಎಂದು ಮಾಂಝಿ ವಾಗ್ದಾಳಿ ನಡೆಸಿದ್ದಾರೆ. </p><p>ಪಟ್ನಾದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಿತೀಶ್ ಕುಮಾರ್ ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಎಂಬ ಆರೋಪಿಸಿ ನಿತೀಶ್ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿದ್ದವು. </p><p><strong>ನಿತೀಶ್ ನಡೆ ಖಂಡಿಸಿದ ಯಾದವ್:</strong> ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ. ಬಿಹಾರಿ ಆಗಿ ಅವರು ಮಾಡಿದ ಕೆಲಸದಿಂದ ನನಗೆ ನಾಚಿಕೆಯಾಗುತ್ತಿದೆ. ಮುಖ್ಯಮಂತ್ರಿ ರಾಜ್ಯದ ನಾಯಕರು, ನಿನ್ನೆಯ ಘಟನೆ ದುರದೃಷ್ಟಕರ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಆಕ್ರೋಶ ಹೊರಹಾಕಿದ್ದರು. </p><p>‘ಭಾರತದ ರಾಜಕೀಯದ ಇತಿಹಾಸದಲ್ಲಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರಗೀತೆಯನ್ನು ಅಗೌರವಿಸಿದ ಮೊದಲ ಘಟನೆ ಇದು. ನಿತೀಶ್ ಕುಮಾರ್ ರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು’ ಎಂದು ಅವರು ಆಗ್ರಹಿಸಿದ್ದರು.</p>.ರಾಷ್ಟ್ರಗೀತೆ ವೇಳೆ ಮಾತನಾಡುತ್ತಾ ನಿಂತಿದ್ದ ನಿತೀಶ್ ನಿವೃತ್ತಿ ಪಡೆಯಲಿ: ತೇಜಸ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>