ಮುಂಬೈ: ಅನರ್ಹತೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೋರಿ ಮುಖ್ಯಮಂತ್ರಿ ಏಕನಾಥ ಶಿಂದೆ ಬಣದ 40 ಮಂದಿ ಶಾಸಕರಿಗೆ ಹಾಗೂ ಉದ್ಧವ್ ಠಾಕ್ರೆ ಬಣದ 14 ಮಂದಿ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನರ್ವೇಕರ್ ಶನಿವಾರ ತಿಳಿಸಿದ್ದಾರೆ.
ಶಿವಸೇನಾದ ಸಂವಿಧಾನದ ಪ್ರತಿಯನ್ನು ಚುನಾವಣಾ ಆಯೋಗವು ನೀಡಿದ್ದು, ಅನರ್ಹತೆಯ ಅರ್ಜಿಯ ಕುರಿತು ಶೀಘ್ರ ವಿಚಾರಣೆ ನಡೆಸಲಾಗುವುದು ಎಂದು ನರ್ವೇಕರ್ ಶುಕ್ರವಾರ ಹೇಳಿದ್ದರು.
16 ಮಂದಿ ಶಾಸಕರ ಅನರ್ಹತೆ ವಿಚಾರದಲ್ಲಿ ಸ್ಪೀಕರ್ಗೆ ನಿರ್ದೇಶನ ನೀಡಬೇಕೆಂದು ಕೋರಿ ಶಿವಸೇನಾದ ಉದ್ಧವ್ ಠಾಕ್ರೆ ಬಣ ಈಚೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
2022ರ ಜೂನ್ನಲ್ಲಿ ಶಿವಸೇನಾದ ಮುಖ್ಯ ಸಚೇತಕರಾಗಿದ್ದ ಸುನಿಲ್ ಪ್ರಭು ಅವರು ಬಂಡಾಯವೆದ್ದಿದ್ದ 16 ಶಾಸಕರ ಅನರ್ಹತೆಗೆ ಅರ್ಜಿ ಸಲ್ಲಿಸಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.