ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಐಪಿ ಸಂಸ್ಕೃತಿಗೆ ವಿದಾಯ ಹಾಡಿದ ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ

Published 22 ಫೆಬ್ರುವರಿ 2024, 4:00 IST
Last Updated 22 ಫೆಬ್ರುವರಿ 2024, 4:00 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ವಿಐಪಿ ಸಂಸ್ಕೃತಿಗೆ ವಿದಾಯ ಹೇಳಿದ್ದಾರೆ.

ಭಜನ್​ಲಾಲ್ ಅವರು ಇನ್ನು ಮುಂದೆ ರಸ್ತೆಯಲ್ಲಿ ಸಾಮಾನ್ಯ ಜನರಂತೆ ಸಂಚರಿಸಲಿದ್ದಾರೆ. ಸಿಗ್ನಲ್​ಗಳಲ್ಲಿ ಅವರ ವಾಹನ ಹಾಗೂ ಬೆಂಗಾವಲು ವಾಹನ ಎಲ್ಲಾ ವಾಹನಗಳು ನಿಲ್ಲುವಂತೆಯೇ ನಿಲ್ಲಲಿದೆ. ಏಕೆಂದರೆ ಅವರು ತಮಗೆ ನೀಡಲಾದ ವಿಐಪಿ ಸವಲತ್ತುಗಳನ್ನು ತ್ಯಜಿಸಲು ನಿರ್ಧರಿಸಿದ್ದಾರೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಯು.ಆರ್ ಸಾಹೂ ತಿಳಿಸಿದ್ದಾರೆ.

ವಿಐಪಿ ಸಂಚಾರದ ಸಮಯದಲ್ಲಿ ಸಾಮಾನ್ಯ ಜನರು ಮತ್ತು ಗಂಭೀರ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಭಜನ್‌ಲಾಲ್ ಬುಧವಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಅವರು ಬುಧವಾರ ಡಿಡಿಜಿ ಸಾಹೂ ಅವರಿಗೆ ನಿರ್ಧಾರದ ಕುರಿತು ಸೂಚನೆ ನೀಡಿದ್ದಾರೆ.

‘ಮುಖ್ಯಮಂತ್ರಿಗಳಿಗೆ ಒದಗಿಸಲಾದ ಭದ್ರತೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ವಿಐಪಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ಸಾಮಾನ್ಯ ಜನರು ಮತ್ತು ರೋಗಿಗಳು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಡಿಜಿಪಿ ಸಾಹೂ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT