<p>ಶಹಾಪುರ (ಯಾದಗಿರಿ ಜಿಲ್ಲೆ): ‘ಕೇಂದ್ರ ಸರ್ಕಾರ ವಿಬಿ–ಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಿ ಹಿಂದಿನ ನರೇಗಾ ಯೋಜನೆ ಮರುಜಾರಿ ಮಾಡದಿದ್ದರೆ, ಹಿಂದೆ ಕೃಷಿ ಕಾಯ್ದೆಗಳ ರದ್ದತಿ ಮಾದರಿಯಲ್ಲಿ ಹೋರಾಟ ನಡೆಯಲಿದೆ’ ಎಂದು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಜಂಟಿ ಕಾರ್ಯದರ್ಶಿ ವಿ.ಶಿವದಾಸನ್ ಹೇಳಿದರು.</p>.<p>ಭಾನುವಾರ ಇಲ್ಲಿ ನಡೆದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ 9ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಹಿಂದೆ ದೆಹಲಿಯಲ್ಲಿ ಸತತವಾಗಿ ಹೋರಾಟದಿಂದ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡವು. ಕೂಲಿಕಾರ್ಮಿಕರು ಎಲ್ಲರೂ ಒಗ್ಗೂಡಿ ಮತ್ತೊಂದು ಹೋರಾಟದ ಭಾಗವಾಗಿ ಮೇ 15ರಂದು ನರೇಗಾ ಮರುಜಾರಿಗೆ ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ವಿ.ವೆಂಕಟ್ ಅವರು, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ರಾಜ್ಯದಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈಗ ಬಿಜೆಪಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ವಂಚಿಸಿದ್ದು, ಕೃಷಿ ಕಾರ್ಮಿಕರ ರಕ್ಷಣೆಗೆ ಮುಂದಾಗುತ್ತಿಲ್ಲ’ ಎಂದರು.</p>.<p>ಬಹಿರಂಗ ಸಭೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕೆಂಪು ವಸ್ತ್ರಧಾರಿಗಳು, ರೈತರು, ಕೂಲಿಕಾರ್ಮಿಕರು ಕೆಂಪು ಬಾವುಟ ಹಿಡಿದು ಸಾಗಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-51-1628831059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ (ಯಾದಗಿರಿ ಜಿಲ್ಲೆ): ‘ಕೇಂದ್ರ ಸರ್ಕಾರ ವಿಬಿ–ಜಿ ರಾಮ್ ಜಿ ಕಾಯ್ದೆ ರದ್ದುಗೊಳಿಸಿ ಹಿಂದಿನ ನರೇಗಾ ಯೋಜನೆ ಮರುಜಾರಿ ಮಾಡದಿದ್ದರೆ, ಹಿಂದೆ ಕೃಷಿ ಕಾಯ್ದೆಗಳ ರದ್ದತಿ ಮಾದರಿಯಲ್ಲಿ ಹೋರಾಟ ನಡೆಯಲಿದೆ’ ಎಂದು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಜಂಟಿ ಕಾರ್ಯದರ್ಶಿ ವಿ.ಶಿವದಾಸನ್ ಹೇಳಿದರು.</p>.<p>ಭಾನುವಾರ ಇಲ್ಲಿ ನಡೆದ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ 9ನೇ ರಾಜ್ಯ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಹಿಂದೆ ದೆಹಲಿಯಲ್ಲಿ ಸತತವಾಗಿ ಹೋರಾಟದಿಂದ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡವು. ಕೂಲಿಕಾರ್ಮಿಕರು ಎಲ್ಲರೂ ಒಗ್ಗೂಡಿ ಮತ್ತೊಂದು ಹೋರಾಟದ ಭಾಗವಾಗಿ ಮೇ 15ರಂದು ನರೇಗಾ ಮರುಜಾರಿಗೆ ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ವಿ.ವೆಂಕಟ್ ಅವರು, ‘ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ರಾಜ್ಯದಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಈಗ ಬಿಜೆಪಿಯ ಹಾದಿಯಲ್ಲಿ ಸಾಗುತ್ತಿದ್ದಾರೆ. ಗ್ಯಾರಂಟಿಗಳ ಹೆಸರಿನಲ್ಲಿ ವಂಚಿಸಿದ್ದು, ಕೃಷಿ ಕಾರ್ಮಿಕರ ರಕ್ಷಣೆಗೆ ಮುಂದಾಗುತ್ತಿಲ್ಲ’ ಎಂದರು.</p>.<p>ಬಹಿರಂಗ ಸಭೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕೆಂಪು ವಸ್ತ್ರಧಾರಿಗಳು, ರೈತರು, ಕೂಲಿಕಾರ್ಮಿಕರು ಕೆಂಪು ಬಾವುಟ ಹಿಡಿದು ಸಾಗಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-51-1628831059</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>