<p><strong>ಕೋಲ್ಕತ್ತ:</strong> ಆಗಸ್ಟ್ 1 ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಕಲ್ಕತ್ತ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.ಪಶ್ಚಿಮ ಬಂಗಾಳ: ಬಿಎಸ್ಎಫ್ ಕಾನ್ಸ್ಟೆಬಲ್ನಿಂದ ಅಧಿಕಾರಿ ಕೊಲೆ.<p>ಯೋಜನೆ ಜಾರಿಗೊಳಿಸುವಾಗ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು, ದೇಶದ ಇತರ ರಾಜ್ಯಗಳಲ್ಲಿ ವಿಧಿಸದ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಬಂಧನೆಗಳನ್ನು ವಿಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೈಕೋರ್ಟ್ ಹೇಳಿದೆ.</p><p>ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಅಕ್ರಮಗಳ ಆರೋಪಗಳ ಬಗ್ಗೆ ಕೇಂದ್ರವು ತನ್ನ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡಿರುವ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರ ನೇತೃತ್ವದ ವಿಭಾಗೀಯ ಪೀಠವು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಯೋಜನೆಯನ್ನು ಪೂರ್ವಭಾವಿಯಾಗಿ ಜಾರಿಗೆ ತರಬೇಕೆಂದು ನಿರ್ದೇಶಿಸಿತು.</p>.ಪಶ್ಚಿಮ ಬಂಗಾಳ ವಿಧಾನಸಭೆ: ಸೇನಾಪಡೆಗಳ ಶೌರ್ಯ ಶ್ಲಾಘಿಸುವ ನಿರ್ಣಯ ಅಂಗೀಕಾರ.<p>ಮೂರು ವರ್ಷಗಳ ಹಿಂದೆ ನಡೆದ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಯೋಜನೆಯ ಅನುಷ್ಠಾನದ ಉಸ್ತುವಾರಿ ವಹಿಸಿರುವ ಅಧಿಕಾರಿಗಳು ವಿಶೇಷ ಷರತ್ತುಗಳನ್ನು ವಿಧಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.</p><p>ನರೇಗಾ ಯೋಜನೆಯಡಿ ವೇತನ ವಿತರಣೆಯಲ್ಲಿ ಕೇಂದ್ರವು ಕೆಲವು ಅಕ್ರಮಗಳನ್ನು ಎತ್ತಿ ತೋರಿಸಿದೆ ಎಂಬುದು ವಿವಾದವಲ್ಲ ಎಂದು ನ್ಯಾಯಾಲಯ ಇದೇ ವೇಳೆ ಸ್ಪಷ್ಟಪಡಿಸಿದೆ.</p>.ಬಂಗಾಳ | ₹1,010 ಕೋಟಿ ವೆಚ್ಚದ ನಗರ ಅನಿಲ ವಿತರಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ.<p>ನ್ಯಾಯಮೂರ್ತಿ ಚೈತಾಲಿ ಚಟರ್ಜಿ (ದಾಸ್) ಅವರನ್ನೂ ಒಳಗೊಂಡ ಪೀಠವು, ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ವಸೂಲಿ ಮಾಡಲಾದ ಮೊತ್ತವು ಪಶ್ಚಿಮ ಬಂಗಾಳ ನರೇಗಾದ ರಾಜ್ಯ ನೋಡಲ್ ಏಜೆನ್ಸಿಯ ಬ್ಯಾಂಕ್ ಖಾತೆಯಲ್ಲಿ ಇದೆ ಎನ್ನುವುದನ್ನು ಗಮನಿಸಿತು.</p><p>ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಯೋಜನೆಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಮಾಡುತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.</p> .ಮುರ್ಶಿದಾಬಾದ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ: ಪಶ್ಚಿಮ ಬಂಗಾಳ ರಾಜ್ಯಪಾಲ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಆಗಸ್ಟ್ 1 ರಿಂದ ಪಶ್ಚಿಮ ಬಂಗಾಳದಲ್ಲಿ ನರೇಗಾ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಕಲ್ಕತ್ತ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.ಪಶ್ಚಿಮ ಬಂಗಾಳ: ಬಿಎಸ್ಎಫ್ ಕಾನ್ಸ್ಟೆಬಲ್ನಿಂದ ಅಧಿಕಾರಿ ಕೊಲೆ.<p>ಯೋಜನೆ ಜಾರಿಗೊಳಿಸುವಾಗ ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು, ದೇಶದ ಇತರ ರಾಜ್ಯಗಳಲ್ಲಿ ವಿಧಿಸದ ವಿಶೇಷ ಷರತ್ತುಗಳು, ನಿರ್ಬಂಧಗಳು ಮತ್ತು ನಿಬಂಧನೆಗಳನ್ನು ವಿಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೈಕೋರ್ಟ್ ಹೇಳಿದೆ.</p><p>ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಅಕ್ರಮಗಳ ಆರೋಪಗಳ ಬಗ್ಗೆ ಕೇಂದ್ರವು ತನ್ನ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡಿರುವ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರ ನೇತೃತ್ವದ ವಿಭಾಗೀಯ ಪೀಠವು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಯೋಜನೆಯನ್ನು ಪೂರ್ವಭಾವಿಯಾಗಿ ಜಾರಿಗೆ ತರಬೇಕೆಂದು ನಿರ್ದೇಶಿಸಿತು.</p>.ಪಶ್ಚಿಮ ಬಂಗಾಳ ವಿಧಾನಸಭೆ: ಸೇನಾಪಡೆಗಳ ಶೌರ್ಯ ಶ್ಲಾಘಿಸುವ ನಿರ್ಣಯ ಅಂಗೀಕಾರ.<p>ಮೂರು ವರ್ಷಗಳ ಹಿಂದೆ ನಡೆದ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ಯೋಜನೆಯ ಅನುಷ್ಠಾನದ ಉಸ್ತುವಾರಿ ವಹಿಸಿರುವ ಅಧಿಕಾರಿಗಳು ವಿಶೇಷ ಷರತ್ತುಗಳನ್ನು ವಿಧಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.</p><p>ನರೇಗಾ ಯೋಜನೆಯಡಿ ವೇತನ ವಿತರಣೆಯಲ್ಲಿ ಕೇಂದ್ರವು ಕೆಲವು ಅಕ್ರಮಗಳನ್ನು ಎತ್ತಿ ತೋರಿಸಿದೆ ಎಂಬುದು ವಿವಾದವಲ್ಲ ಎಂದು ನ್ಯಾಯಾಲಯ ಇದೇ ವೇಳೆ ಸ್ಪಷ್ಟಪಡಿಸಿದೆ.</p>.ಬಂಗಾಳ | ₹1,010 ಕೋಟಿ ವೆಚ್ಚದ ನಗರ ಅನಿಲ ವಿತರಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ.<p>ನ್ಯಾಯಮೂರ್ತಿ ಚೈತಾಲಿ ಚಟರ್ಜಿ (ದಾಸ್) ಅವರನ್ನೂ ಒಳಗೊಂಡ ಪೀಠವು, ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ವಸೂಲಿ ಮಾಡಲಾದ ಮೊತ್ತವು ಪಶ್ಚಿಮ ಬಂಗಾಳ ನರೇಗಾದ ರಾಜ್ಯ ನೋಡಲ್ ಏಜೆನ್ಸಿಯ ಬ್ಯಾಂಕ್ ಖಾತೆಯಲ್ಲಿ ಇದೆ ಎನ್ನುವುದನ್ನು ಗಮನಿಸಿತು.</p><p>ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಯೋಜನೆಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನ ಮಾಡುತಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.</p> .ಮುರ್ಶಿದಾಬಾದ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ: ಪಶ್ಚಿಮ ಬಂಗಾಳ ರಾಜ್ಯಪಾಲ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>