ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಅನಿವಾಸಿ ಭಾರತೀಯರಿಗೆ ಅಂಚೆ ಮತಪತ್ರ: ಚುನಾವಣಾ ಆಯೋಗ ಚಿಂತನೆ

Published : 11 ಸೆಪ್ಟೆಂಬರ್ 2025, 16:00 IST
Last Updated : 11 ಸೆಪ್ಟೆಂಬರ್ 2025, 16:00 IST
ಫಾಲೋ ಮಾಡಿ
Comments
ಇ–ಮತದಾನ ಸೌಲಭ್ಯ ಕಲ್ಪಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಿತು. ಆದರೆ ಇದಕ್ಕೆ ಪರಿಣಾಮಕಾರಿ ವ್ಯವಸ್ಥೆ ಬೇಕು. ಇದರ ಬದಲು ವಿದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಗಳ ಮೂಲಕ ಅಂಚೆ ಮತಪತ್ರ ಸೌಲಭ್ಯ ಒದಗಿಸುವ ಕುರಿತು ಚರ್ಚೆ ನಡೆಯುತ್ತಿದೆ
ರತನ್‌ ಕೇಳ್ಕರ್ ಕೇರಳ ಮುಖ್ಯ ಚುನಾವಣಾಧಿಕಾರಿ
ಕೇರಳದಲ್ಲಿ ಎಸ್‌ಐಆರ್‌: 20ಕ್ಕೆ ಸಭೆ
ಕೇರಳದಲ್ಲಿ ಶೀಘ್ರವೇ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಚರ್ಚಿಸಲು ಇದೇ 20ರಂದು ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರತನ್‌ ಕೇಳ್ಕರ್ ಹೇಳಿದ್ದಾರೆ. '2002ರಲ್ಲಿ ನಡೆಸಿದ್ದ ಎಸ್‌ಐಆರ್‌ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಎಸ್‌ಐಆರ್‌ ನಡೆಸುವ ಕುರಿತಂತೆ ಎಲ್ಲ ಅಧಿಕಾರಿಗಳಿಗೆ ತರಬೇತಿಯನ್ನೂ ನೀಡಲಾಗಿದೆ. ಆಯೋಗದಿಂದ ಸೂಚನೆ ಬಂದ ಕೂಡಲೇ ಎಸ್‌ಐಆರ್‌ ಕಾರ್ಯಕ್ಕೆ ಚಾಲನೆ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT