<p><strong>ಅಹಮದಾಬಾದ್</strong>: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಪರಿಹಾರ ಕಾರ್ಯಾಚರಣೆಗಳಲ್ಲಿ ಇತರ ಸಂಸ್ಥೆಗಳ (ಕೇಂದ್ರ ಮತ್ತು ರಾಜ್ಯ ಸರ್ಕಾರಿ) ಸಿಬ್ಬಂದಿಗೆ ನೆರವಾಗಲು ಎನ್ಎಸ್ಜಿ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಆದರೆ ಅವರಿಗೆ ಯಾವುದೇ ತನಿಖಾ ಅಧಿಕಾರವಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಗುರುವಾರ ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ದುರಂತದಲ್ಲಿ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. </p>.Ahmedabad Plane Crash: 1993ರ ಇಂಡಿಯನ್ ಏರ್ಲೈನ್ಸ್ ದುರಂತ ನೆನಪಿಸಿದ ಘಟನೆ .<h2>ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ: </h2>.<p>ವಿಮಾನ ದುರಂತದ ತನಿಖೆಗೆ ಕೇಂದ್ರ ಸರ್ಕಾರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ದುರ್ಘಟನೆಯ ‘ಮೂಲ ಕಾರಣ’ವನ್ನು ಪತ್ತೆ ಹಚ್ಚುವ ಜತೆಗೆ ಭವಿಷ್ಯದಲ್ಲಿ ಇಂಥ ಘಟನೆಗಳನ್ನು ಎದುರಿಸಲು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಿ ಎಂದು ನಿರ್ದೇಶಿಸಿದೆ.</p>.<p>ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಈಗಾಗಲೇ ತನಿಖೆ ನಡೆಸುತ್ತಿದೆ. ಜತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇತರರ ತಂಡಗಳು ಶುಕ್ರವಾರ ಅಪಘಾತ ಸ್ಥಳಕ್ಕೆ(ಮೇಘನಿ ನಗರ) ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ.</p> .Ahmedabad Plane Crash: ತನಿಖೆಗೆ ಕೇಂದ್ರ ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್</strong>: ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.</p>.<p>ಪರಿಹಾರ ಕಾರ್ಯಾಚರಣೆಗಳಲ್ಲಿ ಇತರ ಸಂಸ್ಥೆಗಳ (ಕೇಂದ್ರ ಮತ್ತು ರಾಜ್ಯ ಸರ್ಕಾರಿ) ಸಿಬ್ಬಂದಿಗೆ ನೆರವಾಗಲು ಎನ್ಎಸ್ಜಿ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಆದರೆ ಅವರಿಗೆ ಯಾವುದೇ ತನಿಖಾ ಅಧಿಕಾರವಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಗುರುವಾರ ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ದುರಂತದಲ್ಲಿ ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. </p>.Ahmedabad Plane Crash: 1993ರ ಇಂಡಿಯನ್ ಏರ್ಲೈನ್ಸ್ ದುರಂತ ನೆನಪಿಸಿದ ಘಟನೆ .<h2>ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ: </h2>.<p>ವಿಮಾನ ದುರಂತದ ತನಿಖೆಗೆ ಕೇಂದ್ರ ಸರ್ಕಾರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ದುರ್ಘಟನೆಯ ‘ಮೂಲ ಕಾರಣ’ವನ್ನು ಪತ್ತೆ ಹಚ್ಚುವ ಜತೆಗೆ ಭವಿಷ್ಯದಲ್ಲಿ ಇಂಥ ಘಟನೆಗಳನ್ನು ಎದುರಿಸಲು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಿ ಎಂದು ನಿರ್ದೇಶಿಸಿದೆ.</p>.<p>ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಈಗಾಗಲೇ ತನಿಖೆ ನಡೆಸುತ್ತಿದೆ. ಜತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇತರರ ತಂಡಗಳು ಶುಕ್ರವಾರ ಅಪಘಾತ ಸ್ಥಳಕ್ಕೆ(ಮೇಘನಿ ನಗರ) ಭೇಟಿ ನೀಡಿವೆ ಎಂದು ಮೂಲಗಳು ತಿಳಿಸಿವೆ.</p> .Ahmedabad Plane Crash: ತನಿಖೆಗೆ ಕೇಂದ್ರ ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>