<p><strong>ನವದೆಹಲಿ</strong>: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ ಬೆನ್ನಲ್ಲೇ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಪ್ರವೇಶಕ್ಕೆ ಒಟ್ಟಿಗೆ ಪರೀಕ್ಷೆ ನಡೆಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗೆಯೇ, ಪ್ರಶ್ನೆಪತ್ರಿಕೆಗಳನ್ನು ತಯಾರಿಸಲು ಹೊರಗಿನ ಸಂಸ್ಥೆಗಳ ಮೇಲಿನ ಅವಲಂಬನೆಯನ್ನು ತಪ್ಪಿಸುವ ಕುರಿತಾಗಿಯೂ ಪರಿಶೀಲನೆ ನಡೆಸುತ್ತಿದೆ.</p><p>ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಕಾಂಗ್ರೆಸ್ ಸಂಸದ ದಿಗ್ವಜಯ್ ಸಿಂಗ್ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಈ ಪ್ರಸ್ತಾವಗಳನ್ನು ಇಟ್ಟಿದ್ದಾರೆ. ಸಭೆ ವೇಳೆ, ಸದ್ಯಕ್ಕೆ ನೀಟ್–ಯುಜಿ ಪ್ರಶ್ನೆಪತ್ರಿಕೆ ‘ಸೋರಿಕೆ’ ಎಂಬುದನ್ನು ಒಪ್ಪಲಾಗದು. ಸಿಬಿಐ ತನಿಖೆ ನಂತರವಷ್ಟೇ ಹಾಗೆ ಕರೆಯಬಹುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (ಎನ್ಟಿಎ) ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.</p><p>ಸಮಿತಿಯಲ್ಲಿರುವ ಬಿಜೆಪಿಯ ಕೆಲವು ಸಚಿವರು ಅಧಿಕಾರಿಗಳ ವಾದವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.</p><p>2026ರ ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಎನ್ಟಿಎ ಸುಧಾರಣೆ ಸಂಬಂಧ ಕೆ.ರಾಧಾಕೃಷ್ಣ ಸಮಿತಿಯ ಶಿಫಾರಸುಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸುವ ಸಂಬಂಧ ದಿಗ್ವಿಜಯ ಸಿಂಗ್ ಅವರು ಗುರುವಾರ ಸಭೆ ಕರೆದಿದ್ದರು.</p><p>‘22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಹೇಗಾಯಿತು? ಅದನ್ನು ತಡೆಯಲು ಏನೆಲ್ಲ ಮಾಡಬಹುದಾಗಿತ್ತು ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು’ ಎಂದು ಸಭೆಗೂ ಮುನ್ನ ಸಿಂಗ್ ಹೇಳಿದ್ದರು.</p><p>ಇಂತಹ ಪ್ರಕರಣಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು, ತೀರಾ ಅಗತ್ಯವಿರುವವರಿಗಷ್ಟೇ ಪ್ರಶ್ನೆಪತ್ರಿಕೆ ತಯಾರಿಕೆ ಮಂಡಳಿಗೆ ಅವಕಾಶ ಕಲ್ಪಿಸುವುದು. ಕ್ರಮೇಣ ಬಾಹ್ಯ ಪರೀಕ್ಷಾ ಸಂಸ್ಥೆಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ಕುರಿತು ಸಭೆಯಲ್ಲಿ ಎನ್ಟಿಎ ಪ್ರಸ್ತಾಪಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ – 2020 ಅಡಿಯಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕೆ ಒಟ್ಟಿಗೆ ಪರೀಕ್ಷೆ ನಡೆಸುವ ಪ್ರಸ್ತಾವನೆಯನ್ನೂ ಇಟ್ಟಿದೆ ಎಂದು ಮೂಲಗಳು ತಿಳಿಸಿವೆ.</p><p>ಶಿಕ್ಷಣ ಸಚಿವಾಲಯದ ಉತ್ತನ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಹಾಗೂ ಎನ್ಟಿಎ ಅಧ್ಯಕ್ಷ ಅಭಿಷೇಕ್ ಸಿಂಗ್ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸ್ಥಾಯಿ ಸಮಿತಿಯ ಎದುರು ಬುಧವಾರವೂ ಹೇಳಿಕೆ ನೀಡಿದ್ದರು.</p><p>ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಿಬಿಐ ಈವರೆಗೆ 10 ಆರೋಪಿಗಳನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ ಬೆನ್ನಲ್ಲೇ, ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಪ್ರವೇಶಕ್ಕೆ ಒಟ್ಟಿಗೆ ಪರೀಕ್ಷೆ ನಡೆಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗೆಯೇ, ಪ್ರಶ್ನೆಪತ್ರಿಕೆಗಳನ್ನು ತಯಾರಿಸಲು ಹೊರಗಿನ ಸಂಸ್ಥೆಗಳ ಮೇಲಿನ ಅವಲಂಬನೆಯನ್ನು ತಪ್ಪಿಸುವ ಕುರಿತಾಗಿಯೂ ಪರಿಶೀಲನೆ ನಡೆಸುತ್ತಿದೆ.</p><p>ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಕಾಂಗ್ರೆಸ್ ಸಂಸದ ದಿಗ್ವಜಯ್ ಸಿಂಗ್ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಈ ಪ್ರಸ್ತಾವಗಳನ್ನು ಇಟ್ಟಿದ್ದಾರೆ. ಸಭೆ ವೇಳೆ, ಸದ್ಯಕ್ಕೆ ನೀಟ್–ಯುಜಿ ಪ್ರಶ್ನೆಪತ್ರಿಕೆ ‘ಸೋರಿಕೆ’ ಎಂಬುದನ್ನು ಒಪ್ಪಲಾಗದು. ಸಿಬಿಐ ತನಿಖೆ ನಂತರವಷ್ಟೇ ಹಾಗೆ ಕರೆಯಬಹುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ (ಎನ್ಟಿಎ) ಅಧಿಕಾರಿಗಳು ಪ್ರತಿಪಾದಿಸಿದ್ದಾರೆ.</p><p>ಸಮಿತಿಯಲ್ಲಿರುವ ಬಿಜೆಪಿಯ ಕೆಲವು ಸಚಿವರು ಅಧಿಕಾರಿಗಳ ವಾದವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.</p><p>2026ರ ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಎನ್ಟಿಎ ಸುಧಾರಣೆ ಸಂಬಂಧ ಕೆ.ರಾಧಾಕೃಷ್ಣ ಸಮಿತಿಯ ಶಿಫಾರಸುಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸುವ ಸಂಬಂಧ ದಿಗ್ವಿಜಯ ಸಿಂಗ್ ಅವರು ಗುರುವಾರ ಸಭೆ ಕರೆದಿದ್ದರು.</p><p>‘22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿದೆ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಹೇಗಾಯಿತು? ಅದನ್ನು ತಡೆಯಲು ಏನೆಲ್ಲ ಮಾಡಬಹುದಾಗಿತ್ತು ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು’ ಎಂದು ಸಭೆಗೂ ಮುನ್ನ ಸಿಂಗ್ ಹೇಳಿದ್ದರು.</p><p>ಇಂತಹ ಪ್ರಕರಣಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು, ತೀರಾ ಅಗತ್ಯವಿರುವವರಿಗಷ್ಟೇ ಪ್ರಶ್ನೆಪತ್ರಿಕೆ ತಯಾರಿಕೆ ಮಂಡಳಿಗೆ ಅವಕಾಶ ಕಲ್ಪಿಸುವುದು. ಕ್ರಮೇಣ ಬಾಹ್ಯ ಪರೀಕ್ಷಾ ಸಂಸ್ಥೆಗಳ ಮೇಲಿನ ಅವಲಂಬನೆಯನ್ನು ತಗ್ಗಿಸುವ ಕುರಿತು ಸಭೆಯಲ್ಲಿ ಎನ್ಟಿಎ ಪ್ರಸ್ತಾಪಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ – 2020 ಅಡಿಯಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶಕ್ಕೆ ಒಟ್ಟಿಗೆ ಪರೀಕ್ಷೆ ನಡೆಸುವ ಪ್ರಸ್ತಾವನೆಯನ್ನೂ ಇಟ್ಟಿದೆ ಎಂದು ಮೂಲಗಳು ತಿಳಿಸಿವೆ.</p><p>ಶಿಕ್ಷಣ ಸಚಿವಾಲಯದ ಉತ್ತನ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಹಾಗೂ ಎನ್ಟಿಎ ಅಧ್ಯಕ್ಷ ಅಭಿಷೇಕ್ ಸಿಂಗ್ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸ್ಥಾಯಿ ಸಮಿತಿಯ ಎದುರು ಬುಧವಾರವೂ ಹೇಳಿಕೆ ನೀಡಿದ್ದರು.</p><p>ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಿಬಿಐ ಈವರೆಗೆ 10 ಆರೋಪಿಗಳನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>