ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಹ್‌ ಗಲಭೆ: ಬಿಟ್ಟು ಬಜರಂಗಿಗೆ ಜಾಮೀನು

Published 30 ಆಗಸ್ಟ್ 2023, 11:19 IST
Last Updated 30 ಆಗಸ್ಟ್ 2023, 11:19 IST
ಅಕ್ಷರ ಗಾತ್ರ

ಗುರುಗ್ರಾಮ: ಇಲ್ಲಿನ ಹಾಗೂ ನೂಹ್‌ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಗೋರಕ್ಷಕ ‘ಬಿಟ್ಟು ಬಜರಂಗಿ‘ಗೆ ನ್ಯಾಯಾಲಯ ಜಾಮೀನು ನೀಡಿದೆ.

ಬಿಟ್ಟು ಬಜರಂಗಿ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪ್ರಥಮ ದರ್ಜೆ ನ್ಯಾಯಾಧೀಶರಾದ ಸಂದೀಪ್‌ ಕುಮಾರ್‌ ಅವರು ಬುಧವಾರ ಜಾಮೀನು ಮಂಜೂರು ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ.

ನೂಹ್‌ನ ಸದರ್‌ ಪೊಲೀಸ್‌ ಠಾಣೆಯಲ್ಲಿ ಬಿಟ್ಟು ಬಜರಂಗಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಎಎಸ್ಪಿ ಉಷಾ ಕುಂಡು ದೂರು ನೀಡಿದ್ದರು. ಬಿಟ್ಟು ಬಜರಂಗಿ ಅವರನ್ನು ಆಗಸ್ಟ್‌ 15ರಂದು ಫರಿದಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು.

ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿತ್ತು. ಬಳಿಕ ಅವರನ್ನು ಫರಿದಾಬಾದ್‌ ಜಿಲ್ಲೆಯ ನೀಮ್ಕಾ ಜೈಲಿಗೆ ಕಳುಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT