<p><strong>ನವದೆಹಲಿ</strong>: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 7ಕ್ಕೆ ಇಳಿಕೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಕಳೆದ ವರ್ಷ ಅಕ್ಟೋಬರ್ನಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆಯು 11 ಹಾಗೂ ಡಿಸೆಂಬರ್ನಲ್ಲಿ 8 ಇತ್ತು. ಇದೀಗ ಅದು 7ಕ್ಕೆ ಇಳಿದಿದೆ. ಇವುಗಳನ್ನು ‘ಹೆಚ್ಚು ಬಾಧಿತ, ಕಳವಳಕಾರಿ ಹಾಗೂ ಇತರ ಎಡಪಂಥೀಯ ಉಗ್ರವಾದದಿಂದ ತೊಂದರೆಗೀಡಾಗಿರುವ ಜಿಲ್ಲೆ’ಗಳೆಂದು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಛತ್ತೀಸಗಢದ ಬಿಜಾಪುರ, ನಾರಾಯಣಪುರ, ಸುಕ್ಮಾ, ಕಾಂಕೇರ್ ಹಾಗೂ ದಂತೇವಾಡ, ಜಾರ್ಖಂಡ್ನ ಪಶ್ಚಿಮ ಸಿಂಗಭೂಮ್ ಮತ್ತು ಒಡಿಶಾದ ಕಂಧಮಾಲ್ ಜಿಲ್ಲೆಗಳನ್ನು ಸದ್ಯ ನಕ್ಸಲ್ ಪೀಡಿತ ಜಿಲ್ಲೆಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾಂಕೇರ್ ಹಾಗೂ ಪಶ್ಚಿಮ ಸಿಂಗಭೂಮ್ ಜಿಲ್ಲೆಗಳು ಆತಂಕಕಾರಿ ವಾತಾವರಣ ಇರುವ ಪ್ರದೇಶಗಳೆನಿಸಿದ್ದು, ಇಲ್ಲಿ ನಕ್ಸಲ್ ಚಟುವಟಿಕೆ ಕ್ಷೀಣಿಸುತ್ತಿವೆ. ಆದರೆ, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಅಗತ್ಯವಿದೆ ಎಂದಿದ್ದಾರೆ. </p>.<p>ದಂತೇವಾಡ ಹಾಗೂ ಕಂಧಮಾಲ್ ಇತರ ಎಡಪಂಥೀಯ ಉಗ್ರವಾದದಿಂದ ತೊಂದರೆಗೀಡಾಗಿರುವ ಜಿಲ್ಲೆಗಳ ವಿಭಾಗದಲ್ಲಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ 7ಕ್ಕೆ ಇಳಿಕೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p>.<p>ಕಳೆದ ವರ್ಷ ಅಕ್ಟೋಬರ್ನಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆಯು 11 ಹಾಗೂ ಡಿಸೆಂಬರ್ನಲ್ಲಿ 8 ಇತ್ತು. ಇದೀಗ ಅದು 7ಕ್ಕೆ ಇಳಿದಿದೆ. ಇವುಗಳನ್ನು ‘ಹೆಚ್ಚು ಬಾಧಿತ, ಕಳವಳಕಾರಿ ಹಾಗೂ ಇತರ ಎಡಪಂಥೀಯ ಉಗ್ರವಾದದಿಂದ ತೊಂದರೆಗೀಡಾಗಿರುವ ಜಿಲ್ಲೆ’ಗಳೆಂದು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಛತ್ತೀಸಗಢದ ಬಿಜಾಪುರ, ನಾರಾಯಣಪುರ, ಸುಕ್ಮಾ, ಕಾಂಕೇರ್ ಹಾಗೂ ದಂತೇವಾಡ, ಜಾರ್ಖಂಡ್ನ ಪಶ್ಚಿಮ ಸಿಂಗಭೂಮ್ ಮತ್ತು ಒಡಿಶಾದ ಕಂಧಮಾಲ್ ಜಿಲ್ಲೆಗಳನ್ನು ಸದ್ಯ ನಕ್ಸಲ್ ಪೀಡಿತ ಜಿಲ್ಲೆಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಕಾಂಕೇರ್ ಹಾಗೂ ಪಶ್ಚಿಮ ಸಿಂಗಭೂಮ್ ಜಿಲ್ಲೆಗಳು ಆತಂಕಕಾರಿ ವಾತಾವರಣ ಇರುವ ಪ್ರದೇಶಗಳೆನಿಸಿದ್ದು, ಇಲ್ಲಿ ನಕ್ಸಲ್ ಚಟುವಟಿಕೆ ಕ್ಷೀಣಿಸುತ್ತಿವೆ. ಆದರೆ, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಅಗತ್ಯವಿದೆ ಎಂದಿದ್ದಾರೆ. </p>.<p>ದಂತೇವಾಡ ಹಾಗೂ ಕಂಧಮಾಲ್ ಇತರ ಎಡಪಂಥೀಯ ಉಗ್ರವಾದದಿಂದ ತೊಂದರೆಗೀಡಾಗಿರುವ ಜಿಲ್ಲೆಗಳ ವಿಭಾಗದಲ್ಲಿವೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>