'ಸೊನೀತ್ಪುರದ ಜಮುಗುರಿಘಾಟ್ನಲ್ಲಿ ನನ್ನ ವಾಹನದ ಮೇಲೆ ಬಿಜೆಪಿಯ ಗುಂಪು ದಾಳಿ ನಡೆಸಿದೆ. ಕಾರಿನ ವಿಂಡ್ಶೀಲ್ಡ್ನಿಂದ ಭಾರತ್ ಜೋಡೊ ನ್ಯಾಯ ಯಾತ್ರೆಯ ಸ್ಟಿಕ್ಕರ್ಗಳನ್ನು ಹರಿದು ಹಾಕಲಾಗಿದೆ. ನೀರನ್ನು ಎಸೆದು ನ್ಯಾಯ ಯಾತ್ರೆಯ ವಿರುದ್ಧ ಘೋಷಣೆ ಕೂಗಲಾಗಿದೆ. ಆದರೆ ನಾವು ಸಂಯಮವನ್ನು ಕಾಪಾಡಿಕೊಂಡೆವು' ಎಂದು ಹೇಳಿದ್ದಾರೆ.
'ನಿಸ್ಸಂಶವಾಗಿಯೂ ಈ ಕೃತ್ಯದ ಹಿಂದೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಕೈವಾಡ ಅಡಗಿದೆ. ಆದರೆ ಬಿಜೆಪಿಯ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ' ಎಂದು ಅವರು ಹೇಳಿದ್ದಾರೆ.
ಅಸ್ಸಾಂನಲ್ಲಿ ಭಾರತ ಜೋಡೊ ನ್ಯಾಯ ಯಾತ್ರೆಯಲ್ಲಿ ಭಾಗವಹಿಸದಂತೆ ಜನರಿಗೆ ಬಿಜೆಪಿ ನೇತೃತ್ವದ ಸರ್ಕಾರವು ಬೆದರಿಕೆ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದಾರೆ.
ಭಾರತ ಜೋಡೊ ನ್ಯಾಯ ಯಾತ್ರೆ ಜನವರಿ 25ರವರೆಗೂ ಅಸ್ಸಾಂನಲ್ಲಿ ನಡೆಯಲಿದೆ.