<p><strong>ಭುವನೇಶ್ವರ:</strong> ಒಡಿಶಾದ ಝಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ದೋಣಿ ಮಗುಚಿಬಿದ್ದು, 8 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದು, ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ. ‘ಇಬ್ಬರು ಬಂಧಿತ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ’ ಎಂದು ಝಾರ್ಸುಗುಡ ಎಸ್.ಪಿ ತಿಳಿಸಿದ್ದಾರೆ. </p>.<p>ನಿಯಮಗಳನ್ನು ಅನುಸರಣೆಯ ನಂತರ ಘಟನೆಯಲ್ಲಿ ಮೃತಪಟ್ಟವರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಗಾಯಾಳುಗಳನ್ನು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು. </p>.<p>ಮುಳುಗಡೆಯಾದ ದೋಣಿಯು ನೋಂದಣಿಯಾಗಿರಲಿಲ್ಲ ಮತ್ತು ಅದು ಕಾರ್ಯಾಚರಣೆಗೆ ಅನರ್ಹವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಝಾರ್ಸುಗುಡ ಜಿಲ್ಲೆಯ ಮೋಟರು ವಾಹನ ನಿರೀಕ್ಷಕ ಲೋಕನಾಥ್ ಮೆಹರ್ ತಿಳಿಸಿದ್ದಾರೆ.</p>.<p>ಅಲ್ಲದೇ ದೋಣಿಯಲ್ಲಿ ಲೈಫ್ ಜಾಕೆಟ್ (ಜೀವ ರಕ್ಷಕ ಕವಚ)ಗಳೂ ಇರಲಿಲ್ಲ ಎಂದಿದ್ದಾರೆ. ದೋಣಿಯು ಕೇವಲ 20 ಜನರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದ್ದರೂ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯಲಾಗಿತ್ತು. ಹೀಗಾಗಿ ಶುಕ್ರವಾರ ಮಧ್ಯಾಹ್ನ ಅಪಘಾತ ಸಂಭವಿಸಿತ್ತು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದ ಝಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ದೋಣಿ ಮಗುಚಿಬಿದ್ದು, 8 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದು, ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ. ‘ಇಬ್ಬರು ಬಂಧಿತ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ’ ಎಂದು ಝಾರ್ಸುಗುಡ ಎಸ್.ಪಿ ತಿಳಿಸಿದ್ದಾರೆ. </p>.<p>ನಿಯಮಗಳನ್ನು ಅನುಸರಣೆಯ ನಂತರ ಘಟನೆಯಲ್ಲಿ ಮೃತಪಟ್ಟವರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಗಾಯಾಳುಗಳನ್ನು ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು. </p>.<p>ಮುಳುಗಡೆಯಾದ ದೋಣಿಯು ನೋಂದಣಿಯಾಗಿರಲಿಲ್ಲ ಮತ್ತು ಅದು ಕಾರ್ಯಾಚರಣೆಗೆ ಅನರ್ಹವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಝಾರ್ಸುಗುಡ ಜಿಲ್ಲೆಯ ಮೋಟರು ವಾಹನ ನಿರೀಕ್ಷಕ ಲೋಕನಾಥ್ ಮೆಹರ್ ತಿಳಿಸಿದ್ದಾರೆ.</p>.<p>ಅಲ್ಲದೇ ದೋಣಿಯಲ್ಲಿ ಲೈಫ್ ಜಾಕೆಟ್ (ಜೀವ ರಕ್ಷಕ ಕವಚ)ಗಳೂ ಇರಲಿಲ್ಲ ಎಂದಿದ್ದಾರೆ. ದೋಣಿಯು ಕೇವಲ 20 ಜನರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದ್ದರೂ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯಲಾಗಿತ್ತು. ಹೀಗಾಗಿ ಶುಕ್ರವಾರ ಮಧ್ಯಾಹ್ನ ಅಪಘಾತ ಸಂಭವಿಸಿತ್ತು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>