<p><strong>ಭುವನೇಶ್ವರ</strong>: ಪ್ರಾಚೀನ ಭಾರತದ ಈಗಿನ ಒಡಿಶಾ ರಾಜ್ಯದ ಭಾಗದಲ್ಲಿ ಬೌದ್ಧ ಪಂಥ ಹುಲುಸಾಗಿ ಬೆಳೆದು ಆ ಪಂಥಕ್ಕೆ ಭದ್ರವಾದ ನೆಲೆ ಒದಗಿಸಿತ್ತು. ಬೌದ್ಧ ಪಂಥದ ಅನೇಕ ಪ್ರಾಚೀನ ಕುರುಹುಗಳು ಒಡಿಶಾದಲ್ಲಿ ಇನ್ನೂ ಸಾಕಷ್ಟು ಸಿಗುತ್ತವೆ.</p><p>ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕಳುಹಿಸಿ ಕೊಟ್ಟಿದ್ದ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಒಡಿಶಾದ ಬೌದ್ಧ ನೆಲೆಗಳಾದ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ಐತಿಹಾಸಿಕ ತಾಣಗಳನ್ನು ಯುನೆಸ್ಕೋ ಸಂಸ್ಥೆ ‘ಶಾರ್ಟ್ ಲಿಸ್ಟ್’ ಮಾಡಿದೆ. ಇನ್ನೇನು ಅಧಿಕೃತ ಘೋಷಣೆಯೊಂದೇ ಬಾಕಿ.</p><p>ಒಡಿಶಾದ ಪ್ರವಾಸೋದ್ಯಮ ಸಚಿವ ಪಾರ್ವತಿ ಪರೀದಾ ಅವರು ಈ ವಿಷಯನ್ನು ಸುದ್ದಿಗೋಷ್ಠಿಯಲ್ಲಿ ಇಂದು ತಿಳಿಸಿದರು.</p><p>ಕಳೆದ ಡಿಸೆಂಬರ್ನಲ್ಲಿ ಭಾರತ ಸರ್ಕಾರದ ಪ್ರಾಚ್ಯ ಇಲಾಖೆ ಒಡಿಶಾದ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ಐತಿಹಾಸಿಕ ತಾಣಗಳನ್ನು ಯುನೆಸ್ಕೊ ತಾಣಗಳನ್ನಾಗಿ ಮಾಡಲು ಪಟ್ಟಿ ಕಳುಹಿಸಿಕೊಟ್ಟಿತ್ತು ಎಂದು ತಿಳಿಸಿದ್ದಾರೆ.</p><p>ಈ ಮೂರು ತಾಣಗಳು ಶಾರ್ಟ್ ಲಿಸ್ಟ್ನಲ್ಲಿ ಬಂದಿದ್ದು ತುಂಬಾ ಸಂತೋಷವಾಗಿದೆ. ಇವು ಯುನೆಸ್ಕೊ ಪಾರಂಪರಿಕ ತಾಣಗಳಾಗಿ ಹೊರಹೊಮ್ಮುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.</p><p>ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ತಾಣಗಳು ಬೌದ್ಧ ಪರಂಪರೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದ್ದು ಭಾರತದ ಪ್ರಮುಖ ಬೌದ್ಧ ನೆಲೆಗಳಾಗಿ (ವಿವಾಹರಗಳಾಗಿ) ಸ್ಥಾನ ಪಡೆದುಕೊಂಡಿವೆ. ಇವುಗಳನ್ನು ಬೌದ್ಧ ಪರಂಪರೆಯ ‘ಡೈಮಂಡ್ ಟ್ರಯಾಂಗಲ್’ ಎಂದು ಕರೆಯಲಾಗುತ್ತದೆ.</p><p>ಕಟಕ್ ಜಿಲ್ಲೆಯಲ್ಲಿರುವ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ತಾಣಗಳು ಪ್ರಾಚೀನ ಭಾರತದಲ್ಲಿ ‘ಹೀನಯಾನ’, ‘ಮಹಾಯಾನ’ ಹಾಗೂ ‘ವಜ್ರಯಾನ’ಕ್ಕೆ ನೆಲೆ ಒದಗಿಸಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಪ್ರಾಚೀನ ಭಾರತದ ಈಗಿನ ಒಡಿಶಾ ರಾಜ್ಯದ ಭಾಗದಲ್ಲಿ ಬೌದ್ಧ ಪಂಥ ಹುಲುಸಾಗಿ ಬೆಳೆದು ಆ ಪಂಥಕ್ಕೆ ಭದ್ರವಾದ ನೆಲೆ ಒದಗಿಸಿತ್ತು. ಬೌದ್ಧ ಪಂಥದ ಅನೇಕ ಪ್ರಾಚೀನ ಕುರುಹುಗಳು ಒಡಿಶಾದಲ್ಲಿ ಇನ್ನೂ ಸಾಕಷ್ಟು ಸಿಗುತ್ತವೆ.</p><p>ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕಳುಹಿಸಿ ಕೊಟ್ಟಿದ್ದ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಒಡಿಶಾದ ಬೌದ್ಧ ನೆಲೆಗಳಾದ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ಐತಿಹಾಸಿಕ ತಾಣಗಳನ್ನು ಯುನೆಸ್ಕೋ ಸಂಸ್ಥೆ ‘ಶಾರ್ಟ್ ಲಿಸ್ಟ್’ ಮಾಡಿದೆ. ಇನ್ನೇನು ಅಧಿಕೃತ ಘೋಷಣೆಯೊಂದೇ ಬಾಕಿ.</p><p>ಒಡಿಶಾದ ಪ್ರವಾಸೋದ್ಯಮ ಸಚಿವ ಪಾರ್ವತಿ ಪರೀದಾ ಅವರು ಈ ವಿಷಯನ್ನು ಸುದ್ದಿಗೋಷ್ಠಿಯಲ್ಲಿ ಇಂದು ತಿಳಿಸಿದರು.</p><p>ಕಳೆದ ಡಿಸೆಂಬರ್ನಲ್ಲಿ ಭಾರತ ಸರ್ಕಾರದ ಪ್ರಾಚ್ಯ ಇಲಾಖೆ ಒಡಿಶಾದ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ಐತಿಹಾಸಿಕ ತಾಣಗಳನ್ನು ಯುನೆಸ್ಕೊ ತಾಣಗಳನ್ನಾಗಿ ಮಾಡಲು ಪಟ್ಟಿ ಕಳುಹಿಸಿಕೊಟ್ಟಿತ್ತು ಎಂದು ತಿಳಿಸಿದ್ದಾರೆ.</p><p>ಈ ಮೂರು ತಾಣಗಳು ಶಾರ್ಟ್ ಲಿಸ್ಟ್ನಲ್ಲಿ ಬಂದಿದ್ದು ತುಂಬಾ ಸಂತೋಷವಾಗಿದೆ. ಇವು ಯುನೆಸ್ಕೊ ಪಾರಂಪರಿಕ ತಾಣಗಳಾಗಿ ಹೊರಹೊಮ್ಮುವುದರಲ್ಲಿ ಸಂದೇಹವಿಲ್ಲ ಎಂದಿದ್ದಾರೆ.</p><p>ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ತಾಣಗಳು ಬೌದ್ಧ ಪರಂಪರೆಯಲ್ಲಿ ಮಹತ್ವದ ಸ್ಥಾನ ಪಡೆದುಕೊಂಡಿದ್ದು ಭಾರತದ ಪ್ರಮುಖ ಬೌದ್ಧ ನೆಲೆಗಳಾಗಿ (ವಿವಾಹರಗಳಾಗಿ) ಸ್ಥಾನ ಪಡೆದುಕೊಂಡಿವೆ. ಇವುಗಳನ್ನು ಬೌದ್ಧ ಪರಂಪರೆಯ ‘ಡೈಮಂಡ್ ಟ್ರಯಾಂಗಲ್’ ಎಂದು ಕರೆಯಲಾಗುತ್ತದೆ.</p><p>ಕಟಕ್ ಜಿಲ್ಲೆಯಲ್ಲಿರುವ ರತ್ನಗಿರಿ, ಉದಯಗಿರಿ ಹಾಗೂ ಲಲಿತಗಿರಿ ತಾಣಗಳು ಪ್ರಾಚೀನ ಭಾರತದಲ್ಲಿ ‘ಹೀನಯಾನ’, ‘ಮಹಾಯಾನ’ ಹಾಗೂ ‘ವಜ್ರಯಾನ’ಕ್ಕೆ ನೆಲೆ ಒದಗಿಸಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>