<p><strong>ಭುವನೇಶ್ವರ:</strong> ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯೊಂದಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದಾರೆ. </p><p>ಸಂತ್ರಸ್ತೆಯ ತಂದೆಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ನೆರವಿನ ಭರವಸೆ ನೀಡಿದ್ದಾರೆ. </p><p>‘ನಿಮ್ಮ ಮಗಳಿಗಾದ ಘಟನೆಯನ್ನು ಕೇಳಿ ತೀವ್ರ ದುಃಖವಾಗಿದೆ. ನಿಮ್ಮ ಮಾನಸಿಕ ಪರಿಸ್ಥಿತಿ ಅರ್ಥವಾಗುತ್ತದೆ. ನಿಮ್ಮೊಂದಿಗೆ ರಾಜ್ಯ ಸರ್ಕಾರವಿದೆ, ನಿಮಗೆ ಸಂಪೂರ್ಣ ನೆರವು ನೀಡುತ್ತೇವೆ’ ಎಂದು ಮಾಂಝಿ ಅವರು ಸಂತ್ರಸ್ತೆಯ ತಂದೆಗೆ ಆಶ್ವಾಸನೆ ನೀಡಿದ್ದಾರೆ. </p><p>ಒಡಿಶಾದ ಹಿರಿಯ ಅಧಿಕಾರಿಯೊಬ್ಬರು ಪಶ್ಚಿಮ ಬಂಗಾಳ ಸರ್ಕಾರದ ಜತೆ ನಿಕಟ ಸಂಪರ್ಕದಲ್ಲಿದ್ದಾರೆ. ಅವರು ಎಲ್ಲಾ ರೀತಿಯ ಕಾನೂನು ನೆರವು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಸಂತ್ರಸ್ತೆಯು ಬೇಗನೇ ಗುಣಮುಖವಾಗಿ, ಮೊದಲಿನಂತೆ ಸಹಜ ಜೀವನ ನಡೆಸಲಿ ಎಂದು ಮಾಂಝಿ ಆಶಿಸಿದ್ದಾರೆ. </p><p>ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.</p><p>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. </p>.ಪ.ಬಂಗಾಳ | ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯೊಂದಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಅವರು ದೂರವಾಣಿ ಕರೆಯ ಮೂಲಕ ಮಾತನಾಡಿದ್ದಾರೆ. </p><p>ಸಂತ್ರಸ್ತೆಯ ತಂದೆಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ನೆರವಿನ ಭರವಸೆ ನೀಡಿದ್ದಾರೆ. </p><p>‘ನಿಮ್ಮ ಮಗಳಿಗಾದ ಘಟನೆಯನ್ನು ಕೇಳಿ ತೀವ್ರ ದುಃಖವಾಗಿದೆ. ನಿಮ್ಮ ಮಾನಸಿಕ ಪರಿಸ್ಥಿತಿ ಅರ್ಥವಾಗುತ್ತದೆ. ನಿಮ್ಮೊಂದಿಗೆ ರಾಜ್ಯ ಸರ್ಕಾರವಿದೆ, ನಿಮಗೆ ಸಂಪೂರ್ಣ ನೆರವು ನೀಡುತ್ತೇವೆ’ ಎಂದು ಮಾಂಝಿ ಅವರು ಸಂತ್ರಸ್ತೆಯ ತಂದೆಗೆ ಆಶ್ವಾಸನೆ ನೀಡಿದ್ದಾರೆ. </p><p>ಒಡಿಶಾದ ಹಿರಿಯ ಅಧಿಕಾರಿಯೊಬ್ಬರು ಪಶ್ಚಿಮ ಬಂಗಾಳ ಸರ್ಕಾರದ ಜತೆ ನಿಕಟ ಸಂಪರ್ಕದಲ್ಲಿದ್ದಾರೆ. ಅವರು ಎಲ್ಲಾ ರೀತಿಯ ಕಾನೂನು ನೆರವು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಸಂತ್ರಸ್ತೆಯು ಬೇಗನೇ ಗುಣಮುಖವಾಗಿ, ಮೊದಲಿನಂತೆ ಸಹಜ ಜೀವನ ನಡೆಸಲಿ ಎಂದು ಮಾಂಝಿ ಆಶಿಸಿದ್ದಾರೆ. </p><p>ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.</p><p>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. </p>.ಪ.ಬಂಗಾಳ | ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>