<p><strong>ಕಟಕ್/ಭುವನೇಶ್ವರ:</strong> ದುರ್ಗಾ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ನಡೆದ ಕಾರಣ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಒಡಿಶಾದ ಕಟಕ್ನ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. </p><p>ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದ್ದು, ಭದ್ರತೆ ಬಿಗಿ ಮಾಡಲಾಗಿದೆ.</p><p>ಈ ನಡುವೆ, ಮೆರವಣಿಗೆಯ ಸಮಯದಲ್ಲಿ ನಡೆದ ಗುಂಪು ಘರ್ಷಣೆಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಇಂದು ನಗರದಲ್ಲಿ 12 ಗಂಟೆಗಳ ಬಂದ್ಗೆ ಕರೆ ನೀಡಿದೆ.</p><p>ಭಾನುವಾರ ನಡೆದ ಹಿಂಸಾಚಾರದಲ್ಲಿ 25 ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಬೆಳಗಿನ ಜಾವ 2 ಗಂಟೆಯ ಹೊತ್ತಿಗೆ ದರ್ಗಾ ಬಜಾರ್ ಪ್ರದೇಶದ ಕಥಜೋಡಿ ನದಿಯ ದಡದ ಕಡೆಗೆ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದಾಗ ಘರ್ಷಣೆ ನಡೆದಿದೆ.</p><p>ಸದ್ಯ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣಿರಿಸಿದ್ದು, ನಕಲಿ ವಿಡಿಯೊಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಕ್/ಭುವನೇಶ್ವರ:</strong> ದುರ್ಗಾ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗುಂಪು ಘರ್ಷಣೆ ನಡೆದ ಕಾರಣ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ಒಡಿಶಾದ ಕಟಕ್ನ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. </p><p>ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದ್ದು, ಭದ್ರತೆ ಬಿಗಿ ಮಾಡಲಾಗಿದೆ.</p><p>ಈ ನಡುವೆ, ಮೆರವಣಿಗೆಯ ಸಮಯದಲ್ಲಿ ನಡೆದ ಗುಂಪು ಘರ್ಷಣೆಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಇಂದು ನಗರದಲ್ಲಿ 12 ಗಂಟೆಗಳ ಬಂದ್ಗೆ ಕರೆ ನೀಡಿದೆ.</p><p>ಭಾನುವಾರ ನಡೆದ ಹಿಂಸಾಚಾರದಲ್ಲಿ 25 ಜನರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಬೆಳಗಿನ ಜಾವ 2 ಗಂಟೆಯ ಹೊತ್ತಿಗೆ ದರ್ಗಾ ಬಜಾರ್ ಪ್ರದೇಶದ ಕಥಜೋಡಿ ನದಿಯ ದಡದ ಕಡೆಗೆ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದಾಗ ಘರ್ಷಣೆ ನಡೆದಿದೆ.</p><p>ಸದ್ಯ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣಿರಿಸಿದ್ದು, ನಕಲಿ ವಿಡಿಯೊಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>