<p><strong>ಭುವನೇಶ್ವರ:</strong> ಒಡಿಶಾದ ಢೆಂಕನಾಲ್ ಜಿಲ್ಲೆಯ ಕಲ್ಲಿನ ಕ್ವಾರಿಯೊಂದರಲ್ಲಿ ಬಂಡೆಯ ದೊಡ್ಡ ಭಾಗವೊಂದು ಕುಸಿದು ಹಲವು ಮಂದಿ ಸಾವಿಗೀಡಾಗಿರುವ ಸಂಶಯವಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.ಒಡಿಶಾ: ಹೆಚ್ಚುವರಿ ತಹಶೀಲ್ದಾರ್ ಬಳಿ ₹75 ಲಕ್ಷ ನಗದು, ಆಸ್ತಿ ಪತ್ತೆ.<p>ಮೊತಂಗ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ಈ ಕ್ವಾರಿ ಇದ್ದು, ಶನಿವಾರ ಸಂಜೆ ಕೆಲವು ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.</p><p>ಕಲ್ಲಿನಡಿಯಲ್ಲಿ ಎಷ್ಟು ಕಾರ್ಮಿಕರು ಸಿಲುಕಿದ್ದಾರೆ, ಘಟನೆಗೆ ಕಾರಣ ಏನು ಎನ್ನುವುದರ ಬಗ್ಗೆ ಸ್ಪಷ್ಟನೆ ಇಲ್ಲ. ಅಗ್ನಿ ಶಾಮಕ ತಂಡ, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ, ಶ್ವಾನ ದಳ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.ಒಡಿಶಾ | ರಾಹುಲ್ ವಿರುದ್ಧ ಸೋನಿಯಾಗೆ ಪತ್ರ: ಕಾಂಗ್ರೆಸ್ನಿಂದ ಮಾಜಿ ಶಾಸಕನ ಅಮಾನತು.<p>ಢೆಂಕನಾಲ್ ಜಿಲ್ಲಾಧಿಕಾರಿ ಆಶೀಶ್ ಈಶ್ವರ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಭಿನವ್ ಸೋಂಕರ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p><p>‘ಢೆಂಕನಾಲ್ ನ ಕ್ವಾರಿಯೊಂದರಲ್ಲಿ ಬಂಡೆ ಕುಸಿದು ಹಲವು ಮಂದಿ ಸಾವಿಗೀಡಾಗಿರುವ ವಿಷಯ ಕೇಳಿ ನೋವಾಯಿತು. ಈ ದುಃಖದ ಸಮಯದಲ್ಲಿ, ಅಗಲಿದವರ ಆತ್ಮಗಳಿಗೆ ಶಾಶ್ವತ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬ ಸದಸ್ಯರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ‘ಎಕ್ಸ್’ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.</p> .ಒಡಿಶಾ: ಬಿಜೆಪಿ ಶಾಸಕ ಪ್ರಮಾಣವಚನ ಸ್ವೀಕಾರ; ಸದನದಲ್ಲಿ ಸಂಖ್ಯಾಬಲ 79ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದ ಢೆಂಕನಾಲ್ ಜಿಲ್ಲೆಯ ಕಲ್ಲಿನ ಕ್ವಾರಿಯೊಂದರಲ್ಲಿ ಬಂಡೆಯ ದೊಡ್ಡ ಭಾಗವೊಂದು ಕುಸಿದು ಹಲವು ಮಂದಿ ಸಾವಿಗೀಡಾಗಿರುವ ಸಂಶಯವಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.ಒಡಿಶಾ: ಹೆಚ್ಚುವರಿ ತಹಶೀಲ್ದಾರ್ ಬಳಿ ₹75 ಲಕ್ಷ ನಗದು, ಆಸ್ತಿ ಪತ್ತೆ.<p>ಮೊತಂಗ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ಈ ಕ್ವಾರಿ ಇದ್ದು, ಶನಿವಾರ ಸಂಜೆ ಕೆಲವು ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.</p><p>ಕಲ್ಲಿನಡಿಯಲ್ಲಿ ಎಷ್ಟು ಕಾರ್ಮಿಕರು ಸಿಲುಕಿದ್ದಾರೆ, ಘಟನೆಗೆ ಕಾರಣ ಏನು ಎನ್ನುವುದರ ಬಗ್ಗೆ ಸ್ಪಷ್ಟನೆ ಇಲ್ಲ. ಅಗ್ನಿ ಶಾಮಕ ತಂಡ, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ, ಶ್ವಾನ ದಳ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.ಒಡಿಶಾ | ರಾಹುಲ್ ವಿರುದ್ಧ ಸೋನಿಯಾಗೆ ಪತ್ರ: ಕಾಂಗ್ರೆಸ್ನಿಂದ ಮಾಜಿ ಶಾಸಕನ ಅಮಾನತು.<p>ಢೆಂಕನಾಲ್ ಜಿಲ್ಲಾಧಿಕಾರಿ ಆಶೀಶ್ ಈಶ್ವರ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಭಿನವ್ ಸೋಂಕರ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p><p>‘ಢೆಂಕನಾಲ್ ನ ಕ್ವಾರಿಯೊಂದರಲ್ಲಿ ಬಂಡೆ ಕುಸಿದು ಹಲವು ಮಂದಿ ಸಾವಿಗೀಡಾಗಿರುವ ವಿಷಯ ಕೇಳಿ ನೋವಾಯಿತು. ಈ ದುಃಖದ ಸಮಯದಲ್ಲಿ, ಅಗಲಿದವರ ಆತ್ಮಗಳಿಗೆ ಶಾಶ್ವತ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬ ಸದಸ್ಯರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ‘ಎಕ್ಸ್’ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.</p> .ಒಡಿಶಾ: ಬಿಜೆಪಿ ಶಾಸಕ ಪ್ರಮಾಣವಚನ ಸ್ವೀಕಾರ; ಸದನದಲ್ಲಿ ಸಂಖ್ಯಾಬಲ 79ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>