<p><strong>ಕಟಕ್ (ಒಡಿಶಾ):</strong> ಜಾತ್ರೆಯ ತೊಟ್ಟಿಲೊಂದು ಅರ್ಧಕ್ಕೆ ನಿಂತಿದ್ದರಿಂದ ಕನಿಷ್ಠ 8 ಮಂದಿ 30 ಅಡಿ ಎತ್ತರದಲ್ಲಿ ಸಿಲುಕಿದ ಘಟನೆ ಕಟಕ್ನ ಬಲಿ ಜಾತ್ರೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬುಧವಾರ ರಾತ್ರಿ 11 ಗಂಟೆ ವೇಳೆಗೆ ಘಟನೆ ನಡೆದಿದ್ದು, ತೊಟ್ಟಿಲು ಏಕಾಏಕಿ ನಿಂತು ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.</p>.ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆ: ಒಡಿಶಾ ಮೂಲದ ಮಹಿಳೆ, ಆಕೆಯ ಸ್ನೇಹಿತನ ಬಂಧನ. <p>ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ, ತೊಟ್ಟಿಲಿನಲ್ಲಿ ಸಿಲುಕಿಕೊಂಡಿದ್ದವರನ್ನು ಹೈಡ್ರೊಲಿಕ್ ಏಣಿ ಬಳಸಿ ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಎರಡು ಗಂಟೆಗೂ ಅಧಿಕ ಸಮಯ ಉಯ್ಯಾಲೆಯಲ್ಲಿ ಸಿಲುಕಿಕೊಂಡಿದ್ದರಿಂದ ಅವರು ಭಯಭೀತರಾಗಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.</p>.ಪ.ಬಂಗಾಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ತಂದೆಗೆ ನೆರವಿನ ಭರವಸೆ ನೀಡಿದ ಒಡಿಶಾ CM.<p>ಕಟಕ್ ಡಿಸಿಪಿ ಖಿಲಾರಿ ರಿಷಿಕೇಶ್ ನ್ಯಾನ್ದೇವ್ ಹಾಗೂ ಇತರ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ ವೇಲ್ವಿಚಾರಣೆ ನಡೆಸಿದ್ದಾರೆ.</p><p>ತೊಟ್ಟಿಲಿನಲ್ಲಿ ಸಿಲುಕಿಕೊಂಡ ಎಲ್ಲರನ್ನೂ ರಕ್ಷಿಸಲಾಗಿದೆ. ಬಳಿಕ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.</p>.ಒಡಿಶಾ: ಹಸುವಿನ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಕೊಂದ ವ್ಯಕ್ತಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಟಕ್ (ಒಡಿಶಾ):</strong> ಜಾತ್ರೆಯ ತೊಟ್ಟಿಲೊಂದು ಅರ್ಧಕ್ಕೆ ನಿಂತಿದ್ದರಿಂದ ಕನಿಷ್ಠ 8 ಮಂದಿ 30 ಅಡಿ ಎತ್ತರದಲ್ಲಿ ಸಿಲುಕಿದ ಘಟನೆ ಕಟಕ್ನ ಬಲಿ ಜಾತ್ರೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬುಧವಾರ ರಾತ್ರಿ 11 ಗಂಟೆ ವೇಳೆಗೆ ಘಟನೆ ನಡೆದಿದ್ದು, ತೊಟ್ಟಿಲು ಏಕಾಏಕಿ ನಿಂತು ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.</p>.ಶೌಚಾಲಯದಲ್ಲಿ ಕ್ಯಾಮೆರಾ ಪತ್ತೆ: ಒಡಿಶಾ ಮೂಲದ ಮಹಿಳೆ, ಆಕೆಯ ಸ್ನೇಹಿತನ ಬಂಧನ. <p>ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ, ತೊಟ್ಟಿಲಿನಲ್ಲಿ ಸಿಲುಕಿಕೊಂಡಿದ್ದವರನ್ನು ಹೈಡ್ರೊಲಿಕ್ ಏಣಿ ಬಳಸಿ ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಎರಡು ಗಂಟೆಗೂ ಅಧಿಕ ಸಮಯ ಉಯ್ಯಾಲೆಯಲ್ಲಿ ಸಿಲುಕಿಕೊಂಡಿದ್ದರಿಂದ ಅವರು ಭಯಭೀತರಾಗಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.</p>.ಪ.ಬಂಗಾಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆಯ ತಂದೆಗೆ ನೆರವಿನ ಭರವಸೆ ನೀಡಿದ ಒಡಿಶಾ CM.<p>ಕಟಕ್ ಡಿಸಿಪಿ ಖಿಲಾರಿ ರಿಷಿಕೇಶ್ ನ್ಯಾನ್ದೇವ್ ಹಾಗೂ ಇತರ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗೆ ವೇಲ್ವಿಚಾರಣೆ ನಡೆಸಿದ್ದಾರೆ.</p><p>ತೊಟ್ಟಿಲಿನಲ್ಲಿ ಸಿಲುಕಿಕೊಂಡ ಎಲ್ಲರನ್ನೂ ರಕ್ಷಿಸಲಾಗಿದೆ. ಬಳಿಕ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.</p>.ಒಡಿಶಾ: ಹಸುವಿನ ಜೊತೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಕೊಂದ ವ್ಯಕ್ತಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>