<p><strong>ಬಾಲೇಶ್ವರ (ಒಡಿಶಾ): </strong>ನೆರೆಯ ಜಾರ್ಖಂಡ್ನಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಸುವರ್ಣರೇಖಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿತ್ತು. ಇಂದು (ಭಾನುವಾರ) ನದಿಯ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಆದರೂ ಕೂಡ ಬಾಲೇಶ್ವರದ 50ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಲ್ಲದೇ ಜಿಲ್ಲೆಯ ಬಲಿಪಾಲ್ ಬ್ಲಾಕ್ನ ಬಿಷ್ಣುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯುವಕನೊಬ್ಬ ಶನಿವಾರ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ ಎಂದು ವರದಿಯಾಗಿದೆ. ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ (ಒಡಿಆರ್ಎಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಒಡಿಶಾಗೆ ತಿಳಿಸದೆ ಜಾರ್ಖಂಡ್ನ ಚಾಂಡಿಲ್ ಅಣೆಕಟ್ಟಿನ ಅಧಿಕಾರಿಗಳು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಕನಿಷ್ಠ ನಾಲ್ಕು ಬ್ಲಾಕ್ಗಳು (ಬಲಿಯಾಪಾಲ್, ಭೋಗ್ರೈ, ಬಸ್ತಾ ಮತ್ತು ಜಲೇಶ್ವರ) ಜಲಾವೃತಗೊಂಡಿವೆ ಎಂದು ಬಾಲೇಶ್ವರ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ.</p>.<p>ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಬಾಲೇಶ್ವರ ಜಿಲ್ಲೆಯ ನಾಲ್ಕು ಬ್ಲಾಕ್ಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಸುವರ್ಣರೇಖಾ ನದಿಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು, ಪರಿಸ್ಥಿತಿ ಸುಧಾರಿಸುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.</p>.ಒಡಿಶಾ | ಸುವರ್ಣರೇಖಾ ನದಿಯಲ್ಲಿ ದಿಢೀರ್ ಪ್ರವಾಹ: ಸಂಕಷ್ಟದಲ್ಲಿ 50 ಸಾವಿರ ಮಂದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಲೇಶ್ವರ (ಒಡಿಶಾ): </strong>ನೆರೆಯ ಜಾರ್ಖಂಡ್ನಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಸುವರ್ಣರೇಖಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿತ್ತು. ಇಂದು (ಭಾನುವಾರ) ನದಿಯ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಆದರೂ ಕೂಡ ಬಾಲೇಶ್ವರದ 50ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಲ್ಲದೇ ಜಿಲ್ಲೆಯ ಬಲಿಪಾಲ್ ಬ್ಲಾಕ್ನ ಬಿಷ್ಣುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯುವಕನೊಬ್ಬ ಶನಿವಾರ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ ಎಂದು ವರದಿಯಾಗಿದೆ. ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ (ಒಡಿಆರ್ಎಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಒಡಿಶಾಗೆ ತಿಳಿಸದೆ ಜಾರ್ಖಂಡ್ನ ಚಾಂಡಿಲ್ ಅಣೆಕಟ್ಟಿನ ಅಧಿಕಾರಿಗಳು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಕನಿಷ್ಠ ನಾಲ್ಕು ಬ್ಲಾಕ್ಗಳು (ಬಲಿಯಾಪಾಲ್, ಭೋಗ್ರೈ, ಬಸ್ತಾ ಮತ್ತು ಜಲೇಶ್ವರ) ಜಲಾವೃತಗೊಂಡಿವೆ ಎಂದು ಬಾಲೇಶ್ವರ ಸಂಸದ ಪ್ರತಾಪ್ ಸಾರಂಗಿ ಆರೋಪಿಸಿದ್ದಾರೆ.</p>.<p>ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ್ದರಿಂದ ಹಠಾತ್ ಪ್ರವಾಹ ಉಂಟಾಗಿದೆ. ಇದರಿಂದಾಗಿ ಬಾಲೇಶ್ವರ ಜಿಲ್ಲೆಯ ನಾಲ್ಕು ಬ್ಲಾಕ್ಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಸುವರ್ಣರೇಖಾ ನದಿಯ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು, ಪರಿಸ್ಥಿತಿ ಸುಧಾರಿಸುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.</p>.ಒಡಿಶಾ | ಸುವರ್ಣರೇಖಾ ನದಿಯಲ್ಲಿ ದಿಢೀರ್ ಪ್ರವಾಹ: ಸಂಕಷ್ಟದಲ್ಲಿ 50 ಸಾವಿರ ಮಂದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>