<p><strong>ನವದೆಹಲಿ:</strong> ಒಡಿಶಾದ ಪುರಿಯಲ್ಲಿ ಮೂವರು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ 15 ವರ್ಷದ ಬಾಲಕಿ ಶನಿವಾರ ತಡ ರಾತ್ರಿ ಮೃತಪಟ್ಟಿದ್ದಾಳೆ.</p><p>ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.</p>.<p>ಬಾಲಕಿ ನಿಧನಕ್ಕೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.</p><p>ಬಾಲಕಿಯ ತಂದೆ ಕೂಡ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದು ಈ ಘಟನೆಯಲ್ಲಿ ಮೂರನೇಯವರ ಕೈವಾಡ ಇಲ್ಲ, ನನ್ನ ಮಗಳು ಮಾನಸಿಕ ಖಿನ್ನತೆಯಿಂದ ಮೃತಪಟ್ಟಿದ್ದಾಳೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.</p><p>ಇತ್ತ ಒಡಿಶಾ ಪೊಲೀಸರು ಕೂಡ ಈ ಘಟನೆಯಲ್ಲಿ ಯಾರ ಕೈವಾಡವೂ ಇಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದಾಗ್ಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. </p><p>ಜುಲೈ 19ರ ಸಂಜೆ ಮೋಟಾರ್ ಸೈಕಲ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಲವಂತವಾಗಿ ಭಾರ್ಗವಿ ನದಿ ದಂಡೆಯ ಸಮೀಪಕ್ಕೆ ಎಳೆದೊಯ್ದು ಅಲ್ಲಿ ಆಕೆಯ ಮೇಲೆ ಪೆಟ್ರೋಲ್ ಉತ್ಪನ್ನದಿಂದ ಬೆಂಕಿ ಹಚ್ಚಿದ್ದ ಘಟನೆ ನೆಡೆದಿತ್ತು. ಸ್ಥಳೀಯರು ಬೆಂಕಿ ನಂದಿಸಿ ರಕ್ಷಣೆ ಮಾಡಿದ್ದರು.</p><p>ಬಾಲಕಿಗೆ ಶೇ 75ರಷ್ಟು ಸುಟ್ಟಗಾಯಗಳಾಗಿದ್ದು, ಮೊದಲು ಆಕೆಯನ್ನು ಭುವನೇಶ್ವರದ ಏಮ್ಸ್ಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ಗೆ ಕರೆತರಲಾಗಿತ್ತು. </p>.15ರ ಬಾಲಕಿಗೆ ಬೆಂಕಿ ಹಚ್ಚಿದ ಮೂವರು ದುಷ್ಕರ್ಮಿಗಳು: ದೆಹಲಿ ಏಮ್ಸ್ಗೆ ದಾಖಲು .ಶೆಡ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು: ತಾಯಿ, ಮಗಳು ಸಜೀವ ದಹನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಒಡಿಶಾದ ಪುರಿಯಲ್ಲಿ ಮೂವರು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ 15 ವರ್ಷದ ಬಾಲಕಿ ಶನಿವಾರ ತಡ ರಾತ್ರಿ ಮೃತಪಟ್ಟಿದ್ದಾಳೆ.</p><p>ಬಾಲಕಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.</p>.<p>ಬಾಲಕಿ ನಿಧನಕ್ಕೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.</p><p>ಬಾಲಕಿಯ ತಂದೆ ಕೂಡ ವಿಡಿಯೊ ಸಂದೇಶ ಬಿಡುಗಡೆ ಮಾಡಿದ್ದು ಈ ಘಟನೆಯಲ್ಲಿ ಮೂರನೇಯವರ ಕೈವಾಡ ಇಲ್ಲ, ನನ್ನ ಮಗಳು ಮಾನಸಿಕ ಖಿನ್ನತೆಯಿಂದ ಮೃತಪಟ್ಟಿದ್ದಾಳೆ. ಇದಕ್ಕೆ ರಾಜಕೀಯ ಬಣ್ಣ ಬಳಿಯಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.</p><p>ಇತ್ತ ಒಡಿಶಾ ಪೊಲೀಸರು ಕೂಡ ಈ ಘಟನೆಯಲ್ಲಿ ಯಾರ ಕೈವಾಡವೂ ಇಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದಾಗ್ಯೂ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ. </p><p>ಜುಲೈ 19ರ ಸಂಜೆ ಮೋಟಾರ್ ಸೈಕಲ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಲವಂತವಾಗಿ ಭಾರ್ಗವಿ ನದಿ ದಂಡೆಯ ಸಮೀಪಕ್ಕೆ ಎಳೆದೊಯ್ದು ಅಲ್ಲಿ ಆಕೆಯ ಮೇಲೆ ಪೆಟ್ರೋಲ್ ಉತ್ಪನ್ನದಿಂದ ಬೆಂಕಿ ಹಚ್ಚಿದ್ದ ಘಟನೆ ನೆಡೆದಿತ್ತು. ಸ್ಥಳೀಯರು ಬೆಂಕಿ ನಂದಿಸಿ ರಕ್ಷಣೆ ಮಾಡಿದ್ದರು.</p><p>ಬಾಲಕಿಗೆ ಶೇ 75ರಷ್ಟು ಸುಟ್ಟಗಾಯಗಳಾಗಿದ್ದು, ಮೊದಲು ಆಕೆಯನ್ನು ಭುವನೇಶ್ವರದ ಏಮ್ಸ್ಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ಗೆ ಕರೆತರಲಾಗಿತ್ತು. </p>.15ರ ಬಾಲಕಿಗೆ ಬೆಂಕಿ ಹಚ್ಚಿದ ಮೂವರು ದುಷ್ಕರ್ಮಿಗಳು: ದೆಹಲಿ ಏಮ್ಸ್ಗೆ ದಾಖಲು .ಶೆಡ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು: ತಾಯಿ, ಮಗಳು ಸಜೀವ ದಹನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>