<p><strong>ಭುವನೇಶ್ವರ(ಪಿಟಿಐ):</strong> ಭುವನೇಶ್ವರ ನಗರಪಾಲಿಕೆ (ಬಿಎಂಸಿ) ಹೆಚ್ಚುವರಿ ಆಯುಕ್ತ ರತ್ನಾಕರ ಸಾಹೂ ಅವರ ಮೇಲಿನ ಹಲ್ಲೆ ಖಂಡಿಸಿ ನಡೆಸುತ್ತಿರುವ ಮುಷ್ಕರವನ್ನು ಸ್ಥಗಿತಗೊಳಿಸಿ, ಕರ್ತವ್ಯಕ್ಕೆ ಮರಳಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಒಡಿಶಾ ಸರ್ಕಾರ ಬುಧವಾರ ಮನವಿ ಮಾಡಿದೆ.</p>.<p>ಈ ನಡುವೆ, ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದುಷ್ಕರ್ಮಿಗಳ ಗುಂಪೊಂದು ಬಿಎಂಸಿ ಹೆಚ್ಚುವರಿ ಆಯುಕ್ತ ರತ್ನಾಕರ ಸಾಹೂ ಅವರನ್ನು ಕಚೇರಿಯಿಂದ ಮಂಗಳವಾರ ಹೊರಗೆ ಎಳೆದುಕೊಂಡು ಬಂದು, ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಖಂಡಿಸಿ ಒಡಿಶಾ ಆಡಳಿತ ಸೇವೆ(ಒಎಎಸ್) ಹಾಗೂ ಒಡಿಶಾ ಕಂದಾಯ ಸೇವೆ (ಒಆರ್ಎಸ್) ಅಧಿಕಾರಿಗಳು ಬುಧವಾರದಿಂದ ‘ಕೆಲಸ ಸ್ಥಗಿತ’ ಮುಷ್ಕರ ಆರಂಭಿಸಿದ್ದಾರೆ.</p>.<p>ಇನ್ನೊಂದೆಡೆ, ಅಧಿಕಾರಿಗಳು ಆರಂಭಿಸಿರುವ ‘ಕೆಲಸ ಸ್ಥಗಿತ’ ಮುಷ್ಕರದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟು ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಕೂಡ ನಡೆಸಿದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಸುರೇಶ್ ಪೂಜಾರಿ,‘ಅಧಿಕಾರಿ ಮೇಲಿನ ಹಲ್ಲೆ ಘಟನೆ ಎಲ್ಲರಿಗೂ ಆಘಾತ ತಂದಿದೆ. ಇಂತಹ ಕೃತ್ಯವನ್ನು ಯಾರೂ ಬೆಂಬಲಿಸುವುದಿಲ್ಲ. ಘಟನೆಗೆ ಸಂಬಂಧಿಸಿ ಈಗಾಗಲೇ ಐವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ(ಪಿಟಿಐ):</strong> ಭುವನೇಶ್ವರ ನಗರಪಾಲಿಕೆ (ಬಿಎಂಸಿ) ಹೆಚ್ಚುವರಿ ಆಯುಕ್ತ ರತ್ನಾಕರ ಸಾಹೂ ಅವರ ಮೇಲಿನ ಹಲ್ಲೆ ಖಂಡಿಸಿ ನಡೆಸುತ್ತಿರುವ ಮುಷ್ಕರವನ್ನು ಸ್ಥಗಿತಗೊಳಿಸಿ, ಕರ್ತವ್ಯಕ್ಕೆ ಮರಳಬೇಕು ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಒಡಿಶಾ ಸರ್ಕಾರ ಬುಧವಾರ ಮನವಿ ಮಾಡಿದೆ.</p>.<p>ಈ ನಡುವೆ, ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದುಷ್ಕರ್ಮಿಗಳ ಗುಂಪೊಂದು ಬಿಎಂಸಿ ಹೆಚ್ಚುವರಿ ಆಯುಕ್ತ ರತ್ನಾಕರ ಸಾಹೂ ಅವರನ್ನು ಕಚೇರಿಯಿಂದ ಮಂಗಳವಾರ ಹೊರಗೆ ಎಳೆದುಕೊಂಡು ಬಂದು, ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಖಂಡಿಸಿ ಒಡಿಶಾ ಆಡಳಿತ ಸೇವೆ(ಒಎಎಸ್) ಹಾಗೂ ಒಡಿಶಾ ಕಂದಾಯ ಸೇವೆ (ಒಆರ್ಎಸ್) ಅಧಿಕಾರಿಗಳು ಬುಧವಾರದಿಂದ ‘ಕೆಲಸ ಸ್ಥಗಿತ’ ಮುಷ್ಕರ ಆರಂಭಿಸಿದ್ದಾರೆ.</p>.<p>ಇನ್ನೊಂದೆಡೆ, ಅಧಿಕಾರಿಗಳು ಆರಂಭಿಸಿರುವ ‘ಕೆಲಸ ಸ್ಥಗಿತ’ ಮುಷ್ಕರದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟು ನಿವಾರಿಸುವ ಸಂಬಂಧ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಕೂಡ ನಡೆಸಿದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಸುರೇಶ್ ಪೂಜಾರಿ,‘ಅಧಿಕಾರಿ ಮೇಲಿನ ಹಲ್ಲೆ ಘಟನೆ ಎಲ್ಲರಿಗೂ ಆಘಾತ ತಂದಿದೆ. ಇಂತಹ ಕೃತ್ಯವನ್ನು ಯಾರೂ ಬೆಂಬಲಿಸುವುದಿಲ್ಲ. ಘಟನೆಗೆ ಸಂಬಂಧಿಸಿ ಈಗಾಗಲೇ ಐವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>