<p><strong>ಭುವನೇಶ್ವರ</strong>: ಒಡಿಶಾ ಸರ್ಕಾರವು 80 ವರ್ಷ ಮೇಲ್ಪಟ್ಟ ಹಾಗೂ ಶೇ.80ರಷ್ಟು ಅಂಗವೈಕಲ್ಯ ಹೊಂದಿರುವವರಿಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಮಾಸಿಕ ₹3,500ಕ್ಕೆ ಹೆಚ್ಚಿಸಲು ನಿರ್ಧರಿಸಿದೆ.</p><p>ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಈ ಮೂಲಕ ಇದೇ ತಿಂಗಳಿಂದಲೇ (ಜನವರಿ) ₹1,200 ಹೆಚ್ಚಿನ ಪಿಂಚಣಿಯ ಹಣವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಅಂತರಂಗ ಅಂಕಣ: ಮಗಳಿಗೆ ವಿಪರೀತ ಡಯೆಟ್ ಹುಚ್ಚು, ಏನು ಮಾಡಲಿ?.ಮೆಡಿಕಲ್ ಸೀಟು ಖಾಲಿ ಉಳಿಯುವಂತಿಲ್ಲ: ಸುಪ್ರೀಂ ಕೋರ್ಟ್. <p>'ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜಿಲಿ' ಯೋಜನೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಯಿಂದ ಸುಮಾರು 3 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಮೇಲ್ಛಾವಣಿ ಸೌರ ಫಲಕಗಳ ಸ್ಥಾಪನೆಗೆ ಹಣಕಾಸು ನೆರವು ಒದಗಿಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.1 ಕಿಲೋ ವ್ಯಾಟ್ (ಕೆಡಬ್ಲ್ಯು) ಮೇಲ್ಛಾವಣಿ ಸೋಲಾರ್ ಪ್ಯಾನಲ್ ಅಳವಡಿಕೆಗೆ ಕೇಂದ್ರ ಸರಕಾರ ₹30 ಸಾವಿರ ಹಾಗೂ ರಾಜ್ಯ ಸರ್ಕಾರ ₹25 ಸಾವಿರ ಸಹಾಯಧನ ಒದಗಿಸಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಅಹುಜಾ ಮಾಹಿತಿ ನೀಡಿದ್ದಾರೆ.</p><p>ಸುಭದ್ರಾ ಯೋಜನೆ, ಎಂಕೆಯುವೈ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಸಮರ್ಪಕ ಜಾರಿ ಕುರಿತು ಚರ್ಚೆ ನಡೆಸಲಾಯಿತು. ಮ್ಯಾನುಯಲ್ ಸ್ಕ್ಯಾವೆಂಜರ್ಗಳ ಉದ್ಯೋಗ ಮತ್ತು ಡ್ರೈ ಲ್ಯಾಟ್ರಿನ್ಗಳ ನಿರ್ಮಾಣ (ನಿಷೇಧ) ಕಾಯಿದೆ 1993 ಅನ್ನು ರದ್ದುಗೊಳಿಸಲಾಗವುದು ಎಂದು ಅಹುಜಾ ಹೇಳಿದ್ದಾರೆ.</p>.ಗೋರಖಪುರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಯೋಗಿ ಆದಿತ್ಯನಾಥ.ಸಂದರ್ಶನ | ಒಪಿಎಸ್ ಮರು ಜಾರಿಗೆ ಹೋರಾಟ ತೀವ್ರ: ಸಿ.ಎಸ್. ಷಡಾಕ್ಷರಿ.ಯತ್ನಾಳ ಬಣದ ವಿರುದ್ಧ ವಿಜಯೇಂದ್ರ ದೂರು: ಒಗ್ಗಟ್ಟಿನ ಹೋರಾಟಕ್ಕೆ ನಡ್ಡಾ ಸೂಚನೆ.ಗಾಂಧಿ ಬಜಾರ್ ಆಧುನೀಕರಣ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾ ಸರ್ಕಾರವು 80 ವರ್ಷ ಮೇಲ್ಪಟ್ಟ ಹಾಗೂ ಶೇ.80ರಷ್ಟು ಅಂಗವೈಕಲ್ಯ ಹೊಂದಿರುವವರಿಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಮಾಸಿಕ ₹3,500ಕ್ಕೆ ಹೆಚ್ಚಿಸಲು ನಿರ್ಧರಿಸಿದೆ.</p><p>ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಹೆಚ್ಚಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ. ಈ ಮೂಲಕ ಇದೇ ತಿಂಗಳಿಂದಲೇ (ಜನವರಿ) ₹1,200 ಹೆಚ್ಚಿನ ಪಿಂಚಣಿಯ ಹಣವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಅಂತರಂಗ ಅಂಕಣ: ಮಗಳಿಗೆ ವಿಪರೀತ ಡಯೆಟ್ ಹುಚ್ಚು, ಏನು ಮಾಡಲಿ?.ಮೆಡಿಕಲ್ ಸೀಟು ಖಾಲಿ ಉಳಿಯುವಂತಿಲ್ಲ: ಸುಪ್ರೀಂ ಕೋರ್ಟ್. <p>'ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜಿಲಿ' ಯೋಜನೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಯೋಜನೆಯಿಂದ ಸುಮಾರು 3 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಮೇಲ್ಛಾವಣಿ ಸೌರ ಫಲಕಗಳ ಸ್ಥಾಪನೆಗೆ ಹಣಕಾಸು ನೆರವು ಒದಗಿಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ.1 ಕಿಲೋ ವ್ಯಾಟ್ (ಕೆಡಬ್ಲ್ಯು) ಮೇಲ್ಛಾವಣಿ ಸೋಲಾರ್ ಪ್ಯಾನಲ್ ಅಳವಡಿಕೆಗೆ ಕೇಂದ್ರ ಸರಕಾರ ₹30 ಸಾವಿರ ಹಾಗೂ ರಾಜ್ಯ ಸರ್ಕಾರ ₹25 ಸಾವಿರ ಸಹಾಯಧನ ಒದಗಿಸಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಅಹುಜಾ ಮಾಹಿತಿ ನೀಡಿದ್ದಾರೆ.</p><p>ಸುಭದ್ರಾ ಯೋಜನೆ, ಎಂಕೆಯುವೈ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಸಮರ್ಪಕ ಜಾರಿ ಕುರಿತು ಚರ್ಚೆ ನಡೆಸಲಾಯಿತು. ಮ್ಯಾನುಯಲ್ ಸ್ಕ್ಯಾವೆಂಜರ್ಗಳ ಉದ್ಯೋಗ ಮತ್ತು ಡ್ರೈ ಲ್ಯಾಟ್ರಿನ್ಗಳ ನಿರ್ಮಾಣ (ನಿಷೇಧ) ಕಾಯಿದೆ 1993 ಅನ್ನು ರದ್ದುಗೊಳಿಸಲಾಗವುದು ಎಂದು ಅಹುಜಾ ಹೇಳಿದ್ದಾರೆ.</p>.ಗೋರಖಪುರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಯೋಗಿ ಆದಿತ್ಯನಾಥ.ಸಂದರ್ಶನ | ಒಪಿಎಸ್ ಮರು ಜಾರಿಗೆ ಹೋರಾಟ ತೀವ್ರ: ಸಿ.ಎಸ್. ಷಡಾಕ್ಷರಿ.ಯತ್ನಾಳ ಬಣದ ವಿರುದ್ಧ ವಿಜಯೇಂದ್ರ ದೂರು: ಒಗ್ಗಟ್ಟಿನ ಹೋರಾಟಕ್ಕೆ ನಡ್ಡಾ ಸೂಚನೆ.ಗಾಂಧಿ ಬಜಾರ್ ಆಧುನೀಕರಣ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>