<p><strong>ಭುವನೇಶ್ವರ:</strong> ಜಮೀನು ಕೊಡಿಸುವುದಾಗಿ ನಂಬಿಸಿ ಅಂಗವಿಕಲ ವ್ಯಕ್ತಿಯೊಬ್ಬರಿಗೆ ₹95 ಲಕ್ಷ ವಂಚಿಸಿದ ಆರೋಪದ ಮೇಲೆ ಒಡಿಶಾ ರಾಜ್ಯದ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಆರಾಧನಾ ದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. </p><p>ಅಂಗವಿಕಲರಾಗಿರುವ ಕಮಲ್ ಕುಮಾರ್ ಎಂಬುವರಿಗೆ ಕಟಕ್ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಜಮೀನು ಕೊಡಿಸುವುದಾಗಿ ಆರಾಧನಾ ಭರವಸೆ ನೀಡಿದ್ದರು. ಇದನ್ನು ನಂಬಿದ ದೂರುದಾರ ಕಮಲ್ ಕುಮಾರ್ ತಮ್ಮ ಪತ್ನಿ ಬೀನಾ ಅವರ ಬ್ಯಾಂಕ್ ಖಾತೆಯಿಂದ ಎರಡು ಪ್ರತ್ಯೇಕ ದಿನಾಂಕಗಳಲ್ಲಿ ಆರಾಧನಾಗೆ ಹಣ ಪಾವತಿಸಿದ್ದರು.</p><p>ಹಣ ಪಡೆದ ನಂತರ ಆರಾಧನಾ ಜಮೀನು ಕೊಡಿಸುವಲ್ಲಿ ವಿಫಲರಾಗಿದ್ದರು. ಕಮಲ್ ಹಣವನ್ನು ವಾಪಾಸ್ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.</p><p>ಇಲ್ಲಿನ ಸಿಡಿಎ ಫೇಸ್-2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖಾ ವರದಿಯಲ್ಲಿ ₹95 ಲಕ್ಷ ಹಣ ವರ್ಗಾವಣೆಯಾಗಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಅನುಮತಿಗಾಗಿ ಪತ್ರ: ನಿಯಮಗಳ ಪ್ರಕಾರ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರದ ಅನುಮತಿ ಅಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆ ಮತ್ತು ಸಾಮಾನ್ಯ ಆಡಳಿತ ಇಲಾಖೆಗೆ ಪೊಲೀಸರು ಪತ್ರ ಬರೆದು ಅಧಿಕಾರಿ ವಿರುದ್ಧ ವಿಚಾರಣೆಗಾಗಿ ಅನುಮತಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಜಮೀನು ಕೊಡಿಸುವುದಾಗಿ ನಂಬಿಸಿ ಅಂಗವಿಕಲ ವ್ಯಕ್ತಿಯೊಬ್ಬರಿಗೆ ₹95 ಲಕ್ಷ ವಂಚಿಸಿದ ಆರೋಪದ ಮೇಲೆ ಒಡಿಶಾ ರಾಜ್ಯದ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಆರಾಧನಾ ದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. </p><p>ಅಂಗವಿಕಲರಾಗಿರುವ ಕಮಲ್ ಕುಮಾರ್ ಎಂಬುವರಿಗೆ ಕಟಕ್ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಜಮೀನು ಕೊಡಿಸುವುದಾಗಿ ಆರಾಧನಾ ಭರವಸೆ ನೀಡಿದ್ದರು. ಇದನ್ನು ನಂಬಿದ ದೂರುದಾರ ಕಮಲ್ ಕುಮಾರ್ ತಮ್ಮ ಪತ್ನಿ ಬೀನಾ ಅವರ ಬ್ಯಾಂಕ್ ಖಾತೆಯಿಂದ ಎರಡು ಪ್ರತ್ಯೇಕ ದಿನಾಂಕಗಳಲ್ಲಿ ಆರಾಧನಾಗೆ ಹಣ ಪಾವತಿಸಿದ್ದರು.</p><p>ಹಣ ಪಡೆದ ನಂತರ ಆರಾಧನಾ ಜಮೀನು ಕೊಡಿಸುವಲ್ಲಿ ವಿಫಲರಾಗಿದ್ದರು. ಕಮಲ್ ಹಣವನ್ನು ವಾಪಾಸ್ ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.</p><p>ಇಲ್ಲಿನ ಸಿಡಿಎ ಫೇಸ್-2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖಾ ವರದಿಯಲ್ಲಿ ₹95 ಲಕ್ಷ ಹಣ ವರ್ಗಾವಣೆಯಾಗಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಅನುಮತಿಗಾಗಿ ಪತ್ರ: ನಿಯಮಗಳ ಪ್ರಕಾರ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರದ ಅನುಮತಿ ಅಗತ್ಯ. ಈ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆ ಮತ್ತು ಸಾಮಾನ್ಯ ಆಡಳಿತ ಇಲಾಖೆಗೆ ಪೊಲೀಸರು ಪತ್ರ ಬರೆದು ಅಧಿಕಾರಿ ವಿರುದ್ಧ ವಿಚಾರಣೆಗಾಗಿ ಅನುಮತಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>