<p><strong>ಭುವನೇಶ್ವರ</strong>: ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಮಾಜಿ ಶಾಸಕ ಮೊಹಮ್ಮದ್ ಮೋಕಿಮ್ ಅವರು ಹೊಸ ಪಕ್ಷ ‘ಒಡಿಶಾ ಜನತಾ ಕಾಂಗ್ರೆಸ್’ ಸ್ಥಾಪಿಸುವುದಾಗಿ ಹೇಳಿದ್ದಾರೆ.</p>.<p>ಏ. 8ರಂದು ಪಕ್ಷವು ಆರಂಭವಾಗಲಿದೆ ಎಂದು ಅವರು ಘೋಷಿಸಿದ್ದಾರೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸನ್ನು ಪ್ರಶ್ನಿಸಿದ ಬಳಿಕ ಕಾಂಗ್ರೆಸ್ನಿಂದ ಮೋಕಿಮ್ ಅವರನ್ನು ಉಚ್ಚಾಟಿಸಲಾಗಿತ್ತು.</p>.<p>‘ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ನಂತರ ಹೊಸ ಪಕ್ಷ ಸ್ಥಾಪಿಸಲು ನಿರ್ಧರಿಸಿದ್ದೇನೆ’ ಎಂದು ಕಟಕ್– ಬಾರಾಬತಿ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಮಾಜಿ ಶಾಸಕರು ತಿಳಿಸಿದ್ದಾರೆ.</p>.<p>‘ಬಿಜೆಡಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಪ್ರಸ್ತುತತೆ ಕಳೆದುಕೊಂಡಿವೆ. 24 ವರ್ಷ ರಾಜ್ಯದ ಚುಕ್ಕಾಣಿ ಹಿಡಿದಿದ್ದ ಬಿಜೆಡಿಯು ಯುವಕರಿಗೆ ಗಮನ ಸೆಳೆಯುವಂತಹ ಏನೊಂದನ್ನೂ ಮಾಡಿಲ್ಲ’ ಎಂದು ಅವರು ದೂರಿದ್ದಾರೆ.</p>.<p>‘ಮೂರು ಬಣ್ಣಗಳನ್ನು ಒಳಗೊಂಡ ಪಕ್ಷದ ಧ್ವಜವು ಈಗಾಗಲೇ ಸಿದ್ಧವಾಗಿದೆ. ಚಿಹ್ನೆ ಪಡೆಯಲು ಕೆಲಸ ಮಾಡಲಾಗುತ್ತಿದೆ. ನಮ್ಮ ಪಕ್ಷವು ಯುವ ಸಮೂಹಕ್ಕೆ ಆದ್ಯತೆ ನೀಡಲಿದೆ’ ಎಂದಿದ್ದಾರೆ.</p>.<p>ಮೋಕಿನ್ ಅವರ ಪುತ್ರಿ ಸೋಫಿಯಾ ಫಿರ್ದೋಸ್ ಅವರು ಕಟಕ್–ಬಾರಾಬತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಹಾಲಿ ಶಾಸಕಿ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಮಾಜಿ ಶಾಸಕ ಮೊಹಮ್ಮದ್ ಮೋಕಿಮ್ ಅವರು ಹೊಸ ಪಕ್ಷ ‘ಒಡಿಶಾ ಜನತಾ ಕಾಂಗ್ರೆಸ್’ ಸ್ಥಾಪಿಸುವುದಾಗಿ ಹೇಳಿದ್ದಾರೆ.</p>.<p>ಏ. 8ರಂದು ಪಕ್ಷವು ಆರಂಭವಾಗಲಿದೆ ಎಂದು ಅವರು ಘೋಷಿಸಿದ್ದಾರೆ.</p>.<p>ಕಳೆದ ವರ್ಷ ಡಿಸೆಂಬರ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸನ್ನು ಪ್ರಶ್ನಿಸಿದ ಬಳಿಕ ಕಾಂಗ್ರೆಸ್ನಿಂದ ಮೋಕಿಮ್ ಅವರನ್ನು ಉಚ್ಚಾಟಿಸಲಾಗಿತ್ತು.</p>.<p>‘ಭ್ರಷ್ಟಾಚಾರದ ವಿರುದ್ಧ ಹೋರಾಡಲು ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ನಂತರ ಹೊಸ ಪಕ್ಷ ಸ್ಥಾಪಿಸಲು ನಿರ್ಧರಿಸಿದ್ದೇನೆ’ ಎಂದು ಕಟಕ್– ಬಾರಾಬತಿ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಮಾಜಿ ಶಾಸಕರು ತಿಳಿಸಿದ್ದಾರೆ.</p>.<p>‘ಬಿಜೆಡಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಪ್ರಸ್ತುತತೆ ಕಳೆದುಕೊಂಡಿವೆ. 24 ವರ್ಷ ರಾಜ್ಯದ ಚುಕ್ಕಾಣಿ ಹಿಡಿದಿದ್ದ ಬಿಜೆಡಿಯು ಯುವಕರಿಗೆ ಗಮನ ಸೆಳೆಯುವಂತಹ ಏನೊಂದನ್ನೂ ಮಾಡಿಲ್ಲ’ ಎಂದು ಅವರು ದೂರಿದ್ದಾರೆ.</p>.<p>‘ಮೂರು ಬಣ್ಣಗಳನ್ನು ಒಳಗೊಂಡ ಪಕ್ಷದ ಧ್ವಜವು ಈಗಾಗಲೇ ಸಿದ್ಧವಾಗಿದೆ. ಚಿಹ್ನೆ ಪಡೆಯಲು ಕೆಲಸ ಮಾಡಲಾಗುತ್ತಿದೆ. ನಮ್ಮ ಪಕ್ಷವು ಯುವ ಸಮೂಹಕ್ಕೆ ಆದ್ಯತೆ ನೀಡಲಿದೆ’ ಎಂದಿದ್ದಾರೆ.</p>.<p>ಮೋಕಿನ್ ಅವರ ಪುತ್ರಿ ಸೋಫಿಯಾ ಫಿರ್ದೋಸ್ ಅವರು ಕಟಕ್–ಬಾರಾಬತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಹಾಲಿ ಶಾಸಕಿ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>