<p><strong>ಭುವನೇಶ್ವರ</strong>: ಒಡಿಶಾ-ಜಾರ್ಖಂಡ್ ಗಡಿ ಬಳಿಯ ರೈಲ್ವೆ ಹಳಿಯಲ್ಲಿ ಮಾವೋವಾದಿಗಳು ಹೂತಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಇಟುವಾ ಓರಾಮ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮಾವೋವಾದಿ ಪೋಸ್ಟರ್ಗಳು ಕಂಡುಬಂದಿದ್ದು, ಸ್ಫೋಟದಲ್ಲಿ ಮಾವೋವಾದಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p><p>ಸುಂದರ್ಗಢ ಜಿಲ್ಲೆಯ ಬಿಮ್ಲಾಗಢ ವಿಭಾಗದ ಕರಂಪಾಡ ಮತ್ತು ರೆಂಜ್ಡಾವನ್ನು ಸಂಪರ್ಕಿಸುವ ರೈಲ್ವೆ ಹಳಿಗಳಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ರೈಲು ಹಳಿಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಆಗ್ನೇಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.</p><p>ಜುಲೈ 28ರಿಂದ ಆಗಸ್ಟ್ 3ರವರೆಗೆ ‘ಹುತಾತ್ಮರ ಸಪ್ತಾಹ’ವನ್ನು ಆಚರಿಸಲು ಮಾವೋವಾದಿಗಳು ಕರೆ ನೀಡಿದ್ದರು ಎಂದು ತಿಳಿದುಬಂದಿದೆ. </p><p>ಘಟನೆ ಸಂಬಂಧ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೂ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾ-ಜಾರ್ಖಂಡ್ ಗಡಿ ಬಳಿಯ ರೈಲ್ವೆ ಹಳಿಯಲ್ಲಿ ಮಾವೋವಾದಿಗಳು ಹೂತಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಇಟುವಾ ಓರಾಮ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮಾವೋವಾದಿ ಪೋಸ್ಟರ್ಗಳು ಕಂಡುಬಂದಿದ್ದು, ಸ್ಫೋಟದಲ್ಲಿ ಮಾವೋವಾದಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p><p>ಸುಂದರ್ಗಢ ಜಿಲ್ಲೆಯ ಬಿಮ್ಲಾಗಢ ವಿಭಾಗದ ಕರಂಪಾಡ ಮತ್ತು ರೆಂಜ್ಡಾವನ್ನು ಸಂಪರ್ಕಿಸುವ ರೈಲ್ವೆ ಹಳಿಗಳಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ರೈಲು ಹಳಿಗಳಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಆಗ್ನೇಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.</p><p>ಜುಲೈ 28ರಿಂದ ಆಗಸ್ಟ್ 3ರವರೆಗೆ ‘ಹುತಾತ್ಮರ ಸಪ್ತಾಹ’ವನ್ನು ಆಚರಿಸಲು ಮಾವೋವಾದಿಗಳು ಕರೆ ನೀಡಿದ್ದರು ಎಂದು ತಿಳಿದುಬಂದಿದೆ. </p><p>ಘಟನೆ ಸಂಬಂಧ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದಲೂ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>