<p><strong>ಬರ್ಹಾಂಪುರ (ಒಡಿಶಾ):</strong> ವಿಷಪೂರಿತ ಹಾವನ್ನು ಕೊಠಡಿಗೆ ಬಿಡುವ ಮೂಲಕ ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬರ್ಹಾಂಪುರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಅಧೇಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p><p>ಆರೋಪಿಯನ್ನು ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಸಂತಿ ಪಾತ್ರಾ (23) ಜತೆ ವೈವಾಹಿಕ ಕಲಹವಿತ್ತು ಎಂದು ತಿಳಿದುಬಂದಿದೆ. 2020ರಲ್ಲಿ ವಿವಾಹವಾಗಿದ್ದ ದಂಪತಿಗೆ ದೇಬಾಸ್ಮಿತಾ ಎಂಬ ಎರಡು ವರ್ಷದ ಮಗಳಿದ್ದಳು.</p><p>ಧಾರ್ಮಿಕ ಉದ್ದೇಶಗಳಿಗೆ ಹಾವನ್ನು ಬಳಸುವುದಾಗಿ ಹೇಳಿ ಹಾವು ಹಿಡಿಯುವವರಿಂದ ಗಣೇಶ್ ವಿಷಪೂರಿತ ಹಾವನ್ನು ಪಡೆದಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಅಕ್ಟೋಬರ್ 6ರಂದು ಪ್ಲಾಸ್ಟಿಕ್ ಜಾರ್ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಬಿಟ್ಟಿದ್ದ. ಮರುದಿನ ಬೆಳಗ್ಗೆ ಇಬ್ಬರೂ ಹಾವು ಕಡಿತದಿಂದ ಮೃತಪಟ್ಟಿದ್ದರು. ಆರೋಪಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ, ಆರೋಪಿಯ ತಂದೆ ಪ್ರಕರಣ ದಾಖಲಿಸಿದ ನಂತರ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬಯಲಾಯಿತು ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಮೀನಾ ತಿಳಿಸಿದ್ದಾರೆ.</p><p>ಘಟನೆ ನಡೆದು ಒಂದು ತಿಂಗಳ ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಸ್ವಲ್ಪ ವಿಳಂಬವಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಹಾಂಪುರ (ಒಡಿಶಾ):</strong> ವಿಷಪೂರಿತ ಹಾವನ್ನು ಕೊಠಡಿಗೆ ಬಿಡುವ ಮೂಲಕ ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಆರೋಪದ ಮೇಲೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬರ್ಹಾಂಪುರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಅಧೇಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p><p>ಆರೋಪಿಯನ್ನು ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಸಂತಿ ಪಾತ್ರಾ (23) ಜತೆ ವೈವಾಹಿಕ ಕಲಹವಿತ್ತು ಎಂದು ತಿಳಿದುಬಂದಿದೆ. 2020ರಲ್ಲಿ ವಿವಾಹವಾಗಿದ್ದ ದಂಪತಿಗೆ ದೇಬಾಸ್ಮಿತಾ ಎಂಬ ಎರಡು ವರ್ಷದ ಮಗಳಿದ್ದಳು.</p><p>ಧಾರ್ಮಿಕ ಉದ್ದೇಶಗಳಿಗೆ ಹಾವನ್ನು ಬಳಸುವುದಾಗಿ ಹೇಳಿ ಹಾವು ಹಿಡಿಯುವವರಿಂದ ಗಣೇಶ್ ವಿಷಪೂರಿತ ಹಾವನ್ನು ಪಡೆದಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಅಕ್ಟೋಬರ್ 6ರಂದು ಪ್ಲಾಸ್ಟಿಕ್ ಜಾರ್ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಬಿಟ್ಟಿದ್ದ. ಮರುದಿನ ಬೆಳಗ್ಗೆ ಇಬ್ಬರೂ ಹಾವು ಕಡಿತದಿಂದ ಮೃತಪಟ್ಟಿದ್ದರು. ಆರೋಪಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆದರೆ, ಆರೋಪಿಯ ತಂದೆ ಪ್ರಕರಣ ದಾಖಲಿಸಿದ ನಂತರ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬಯಲಾಯಿತು ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಮೀನಾ ತಿಳಿಸಿದ್ದಾರೆ.</p><p>ಘಟನೆ ನಡೆದು ಒಂದು ತಿಂಗಳ ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಸ್ವಲ್ಪ ವಿಳಂಬವಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>