<p><strong>ಭುವನೇಶ್ವರ</strong>: ನಿರ್ಮಾಣ ಹಂತದ ಸೆಪ್ಟಿಕ್ ಟ್ಯಾಂಕ್ನಲ್ಲಿ(ಮಲದ ಗುಂಡಿ) ಉಸಿರುಗಟ್ಟಿ 6 ಮಂದಿ ಮೃತಪಟ್ಟಿರುವ ಘಟನೆ ಒಡಿಶಾದ ಕಾಳಹಂಡಿ ಜಿಲ್ಲೆಯಲ್ಲಿ ನಡೆದಿದೆ.</p><p>ಮದನ್ಪುರ-ರಾಂಪುರದಲ್ಲಿ ಈ ಘಟನೆ ನಡೆದಿದೆ.</p><p>ಈ ಘಟನೆಯಲ್ಲಿ ಮತ್ತೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಅಸ್ವಸ್ಥರಾದ ಆರು ಮಂದಿಯನ್ನು ತಕ್ಷಣವೇ ಮದನ್ಪುರ–ರಾಂಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.</p>.ಕಾಕ್ರೋಚ್ ‘ಎಕ್ಸ್’ ಖಾತೆಯ ಮೇಲೆ ನಿರ್ಬಂಧ: ದೆಹಲಿ ಹೈಕೋರ್ಟ್ ಮೊರೆಹೋದ ಸಂಸ್ಥಾಪಕ.TVK ಸೇರ್ಪಡೆಗಾಗಿ AIADMKಗೆ ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ ನಾಲ್ಕಕ್ಕೆ ಏರಿಕೆ. <p>ಮೃತರನ್ನು ಮೂವರು ಮೇಸ್ತ್ರಿಗಳು, ಒಬ್ಬ ಕಾರ್ಮಿಕ, ಸೆಪ್ಟಿಕ್ ಟ್ಯಾಂಕ್ ನಿರ್ಮಿಸುತ್ತಿದ್ದ ಮಾಲೀಕ ಮತ್ತು ಅವರ ಮಗ ಎಂದು ಗುರುತಿಸಲಾಗಿದೆ.</p><p>ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸಕ್ಕಾಗಿ ಅವರು ಸೆಪ್ಟಿಕ್ ಟ್ಯಾಂಕ್ನ ಒಂದು ಭಾಗವನ್ನು ತೆರೆದಾಗ, ಮಾಲೀಕರು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಉಳಿದವರು ಒಬ್ಬರ ಹಿಂದೆ ಒಬ್ಬರಂತೆ ಟ್ಯಾಂಕ್ ಒಳಗೆ ಇಳಿದಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.NEET ಪರೀಕ್ಷೆ ಸಂಬಂಧಿತ ಸಾವುಗಳು: 2025ರಲ್ಲೇ ಅತ್ಯಧಿಕ ಪ್ರಕರಣ ದಾಖಲು.ಭಾರತವನ್ನೇ ಹಿಂದಿಕ್ಕಿದ ತೈವಾನ್ ಜಗತ್ತಿನ 5ನೇ ಅತಿದೊಡ್ಡ ಷೇರು ಮಾರುಕಟ್ಟೆ. <p>ಈ ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು, ಕಾಳಹಂಡಿ ಜಿಲ್ಲೆಯ ಮದನ್ಪುರ-ರಾಂಪುರದ ದುರಂತದಲ್ಲಿ ಆರು ಜನರು ಮೃತಪಟ್ಟಿದ್ದನ್ನು ಕೇಳಿ ತೀವ್ರ ಕಳವಳವಾಯಿತು. ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಎಂದು ಘೋಷಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.</p><p>ಮೃತರ ಅಂತ್ಯಸಂಸ್ಕಾರಕ್ಕಾಗಿ ಜಿಲ್ಲಾಡಳಿತದಿಂದ ತಲಾ ₹30,000 ಬಿಡುಗಡೆ ಮಾಡಲಾಗಿದೆ ಎಂದು ಕಾಳಹಂಡಿ ಕಲೆಕ್ಟರ್ ಸಚಿನ್ ಪವಾರ್ ತಿಳಿಸಿದ್ದಾರೆ. </p><p>ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ನಿರ್ಮಾಣ ಹಂತದ ಸೆಪ್ಟಿಕ್ ಟ್ಯಾಂಕ್ನಲ್ಲಿ(ಮಲದ ಗುಂಡಿ) ಉಸಿರುಗಟ್ಟಿ 6 ಮಂದಿ ಮೃತಪಟ್ಟಿರುವ ಘಟನೆ ಒಡಿಶಾದ ಕಾಳಹಂಡಿ ಜಿಲ್ಲೆಯಲ್ಲಿ ನಡೆದಿದೆ.</p><p>ಮದನ್ಪುರ-ರಾಂಪುರದಲ್ಲಿ ಈ ಘಟನೆ ನಡೆದಿದೆ.</p><p>ಈ ಘಟನೆಯಲ್ಲಿ ಮತ್ತೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಅಸ್ವಸ್ಥರಾದ ಆರು ಮಂದಿಯನ್ನು ತಕ್ಷಣವೇ ಮದನ್ಪುರ–ರಾಂಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.</p>.ಕಾಕ್ರೋಚ್ ‘ಎಕ್ಸ್’ ಖಾತೆಯ ಮೇಲೆ ನಿರ್ಬಂಧ: ದೆಹಲಿ ಹೈಕೋರ್ಟ್ ಮೊರೆಹೋದ ಸಂಸ್ಥಾಪಕ.TVK ಸೇರ್ಪಡೆಗಾಗಿ AIADMKಗೆ ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ ನಾಲ್ಕಕ್ಕೆ ಏರಿಕೆ. <p>ಮೃತರನ್ನು ಮೂವರು ಮೇಸ್ತ್ರಿಗಳು, ಒಬ್ಬ ಕಾರ್ಮಿಕ, ಸೆಪ್ಟಿಕ್ ಟ್ಯಾಂಕ್ ನಿರ್ಮಿಸುತ್ತಿದ್ದ ಮಾಲೀಕ ಮತ್ತು ಅವರ ಮಗ ಎಂದು ಗುರುತಿಸಲಾಗಿದೆ.</p><p>ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸಕ್ಕಾಗಿ ಅವರು ಸೆಪ್ಟಿಕ್ ಟ್ಯಾಂಕ್ನ ಒಂದು ಭಾಗವನ್ನು ತೆರೆದಾಗ, ಮಾಲೀಕರು ಆಕಸ್ಮಿಕವಾಗಿ ಒಳಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಉಳಿದವರು ಒಬ್ಬರ ಹಿಂದೆ ಒಬ್ಬರಂತೆ ಟ್ಯಾಂಕ್ ಒಳಗೆ ಇಳಿದಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.NEET ಪರೀಕ್ಷೆ ಸಂಬಂಧಿತ ಸಾವುಗಳು: 2025ರಲ್ಲೇ ಅತ್ಯಧಿಕ ಪ್ರಕರಣ ದಾಖಲು.ಭಾರತವನ್ನೇ ಹಿಂದಿಕ್ಕಿದ ತೈವಾನ್ ಜಗತ್ತಿನ 5ನೇ ಅತಿದೊಡ್ಡ ಷೇರು ಮಾರುಕಟ್ಟೆ. <p>ಈ ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು, ಕಾಳಹಂಡಿ ಜಿಲ್ಲೆಯ ಮದನ್ಪುರ-ರಾಂಪುರದ ದುರಂತದಲ್ಲಿ ಆರು ಜನರು ಮೃತಪಟ್ಟಿದ್ದನ್ನು ಕೇಳಿ ತೀವ್ರ ಕಳವಳವಾಯಿತು. ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ಎಂದು ಘೋಷಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.</p><p>ಮೃತರ ಅಂತ್ಯಸಂಸ್ಕಾರಕ್ಕಾಗಿ ಜಿಲ್ಲಾಡಳಿತದಿಂದ ತಲಾ ₹30,000 ಬಿಡುಗಡೆ ಮಾಡಲಾಗಿದೆ ಎಂದು ಕಾಳಹಂಡಿ ಕಲೆಕ್ಟರ್ ಸಚಿನ್ ಪವಾರ್ ತಿಳಿಸಿದ್ದಾರೆ. </p><p>ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>