<p><strong>ಭುವನೇಶ್ವರ</strong>: ಜನಗಣತಿಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಿಕ್ಷಕರು ತಾಪಮಾನ ಏರಿಕೆಯಿಂದ ಬಳಲಿ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ.</p><p>ಮೃತರಲ್ಲಿ ಒಬ್ಬ ಶಿಕ್ಷಕ ಮಯೂರಗಂಜ್ ಜಿಲ್ಲೆಯವರಾಗಿದ್ದರೆ, ಇನ್ನೊಬ್ಬ ಶಿಕ್ಷಕ ಸುಂದರಘರ್ ಜಿಲ್ಲೆಯವರು.</p><p>ಈ ಇಬ್ಬರೂ ಶಿಕ್ಷಕರು ತಮಗೆ ವಹಿಸಿದ್ದ ಹಳ್ಳಿಯಲ್ಲಿ ಜನಗಣತಿಯಲ್ಲಿ ತೊಡಗಿಸಿಕೊಂಡಿದ್ದರು. ಎರಡೂ ಜಿಲ್ಲೆಯಲ್ಲೂ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ವರೆಗೆ ಇತ್ತು. ಇದರಿಂದ ತೀವ್ರ ಬಳಲಿದ್ದ ಶಿಕ್ಷಕರನ್ನು ಭಾನುವಾರ ಪತ್ಯೇಕ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.</p><p>ಮೃತರನ್ನು ಮಯೂರಗಂಜ್ ಜಿಲ್ಲೆಯ ಬೆಟ್ನೋಟಿ ಬ್ಲಾಕ್ನ ವೈದ್ಯನಾಥನ್ ಹೈಸ್ಕೂಲ್ನ ಶಿಕ್ಷಕ ರಾಜಕುಮಾರ್ ಹೆಂಬ್ರಾಮ್ ಹಾಗೂ ಸುಂದರಘರ್ ಜಿಲ್ಲೆಯ ಗುರುಂಡಿಯಾ ಬ್ಲಾಕ್ನ ಜರ್ದಾ ಸರ್ಕಾರಿ ಹೈಸ್ಕೂಲ್ನ ಶಿಕ್ಷಕ ಅನುರಾಗ್ ಎಕ್ಕಾ ಎಂದು ಗುರುತಿಸಲಾಗಿದೆ.</p><p>ಶಿಕ್ಷಕರಿಗೆ ಆರೋಗ್ಯ ಸರಿ ಇಲ್ಲದಿದ್ದರೂ ಅಧಿಕಾರಿಗಳು ಗಣತಿ ಕೆಲಸಕ್ಕೆ ಹಾಕಿದ್ದರು. ತೀವ್ರ ತಾಪಮಾನದಿಂದ ಅವರ ಆರೋಗ್ಯ ಇನ್ನಷ್ಟು ಬಿಗಡಾಯಿಸಿತ್ತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.</p><p>ಒಡಿಶಾದಲ್ಲೂ ಬೇಸಿಗೆಯ ತಾಪಮಾನ ಹೆಚ್ಚಳವಾಗಿದ್ದು, ಉಷ್ಣ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ತಾಪಮಾನ ಹೆಚ್ಚಳದಿಂದ ಕಳೆದೊಂದು ವಾರದಲ್ಲಿ ಒಡಿಶಾದಲ್ಲಿ ಮೂರು ಜನ ಮೃತಪಟ್ಟಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಜನಗಣತಿಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಿಕ್ಷಕರು ತಾಪಮಾನ ಏರಿಕೆಯಿಂದ ಬಳಲಿ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ.</p><p>ಮೃತರಲ್ಲಿ ಒಬ್ಬ ಶಿಕ್ಷಕ ಮಯೂರಗಂಜ್ ಜಿಲ್ಲೆಯವರಾಗಿದ್ದರೆ, ಇನ್ನೊಬ್ಬ ಶಿಕ್ಷಕ ಸುಂದರಘರ್ ಜಿಲ್ಲೆಯವರು.</p><p>ಈ ಇಬ್ಬರೂ ಶಿಕ್ಷಕರು ತಮಗೆ ವಹಿಸಿದ್ದ ಹಳ್ಳಿಯಲ್ಲಿ ಜನಗಣತಿಯಲ್ಲಿ ತೊಡಗಿಸಿಕೊಂಡಿದ್ದರು. ಎರಡೂ ಜಿಲ್ಲೆಯಲ್ಲೂ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ವರೆಗೆ ಇತ್ತು. ಇದರಿಂದ ತೀವ್ರ ಬಳಲಿದ್ದ ಶಿಕ್ಷಕರನ್ನು ಭಾನುವಾರ ಪತ್ಯೇಕ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.</p><p>ಮೃತರನ್ನು ಮಯೂರಗಂಜ್ ಜಿಲ್ಲೆಯ ಬೆಟ್ನೋಟಿ ಬ್ಲಾಕ್ನ ವೈದ್ಯನಾಥನ್ ಹೈಸ್ಕೂಲ್ನ ಶಿಕ್ಷಕ ರಾಜಕುಮಾರ್ ಹೆಂಬ್ರಾಮ್ ಹಾಗೂ ಸುಂದರಘರ್ ಜಿಲ್ಲೆಯ ಗುರುಂಡಿಯಾ ಬ್ಲಾಕ್ನ ಜರ್ದಾ ಸರ್ಕಾರಿ ಹೈಸ್ಕೂಲ್ನ ಶಿಕ್ಷಕ ಅನುರಾಗ್ ಎಕ್ಕಾ ಎಂದು ಗುರುತಿಸಲಾಗಿದೆ.</p><p>ಶಿಕ್ಷಕರಿಗೆ ಆರೋಗ್ಯ ಸರಿ ಇಲ್ಲದಿದ್ದರೂ ಅಧಿಕಾರಿಗಳು ಗಣತಿ ಕೆಲಸಕ್ಕೆ ಹಾಕಿದ್ದರು. ತೀವ್ರ ತಾಪಮಾನದಿಂದ ಅವರ ಆರೋಗ್ಯ ಇನ್ನಷ್ಟು ಬಿಗಡಾಯಿಸಿತ್ತು ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.</p><p>ಒಡಿಶಾದಲ್ಲೂ ಬೇಸಿಗೆಯ ತಾಪಮಾನ ಹೆಚ್ಚಳವಾಗಿದ್ದು, ಉಷ್ಣ ಅಲೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ತಾಪಮಾನ ಹೆಚ್ಚಳದಿಂದ ಕಳೆದೊಂದು ವಾರದಲ್ಲಿ ಒಡಿಶಾದಲ್ಲಿ ಮೂರು ಜನ ಮೃತಪಟ್ಟಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>