<p><strong>ಭುವನೇಶ್ವರ:</strong> ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ ಹೆಚ್ಚುವರಿ ತಹಶೀಲ್ದಾರ್ ಬರಂಗ್ ಎಂಬವರಿಗೆ ಸೇರಿದ ಸ್ಥಳಗಳ ಮೇಲೆ ಒಡಿಶಾ ವಿಚಕ್ಷಣ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ₹75 ಲಕ್ಷ ನಗದು, ಮೂರು ಕಟ್ಟಡಗಳು, ಒಂದು ಫ್ಲಾಟ್ ಮತ್ತು ನಾಲ್ಕು ನಿವೇಶನಗಳು ಸೇರಿದಂತೆ ಅನೇಕ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.</p>.<p>‘ಭುವನೇಶ್ವರದಲ್ಲಿ 2–3 ಅಂತಸ್ತಿನ ಕಟ್ಟಡಗಳು, ಒಂದು ಫ್ಲಾಟ್, ಖುರ್ದಾದಲ್ಲಿ ಎರಡು ಅಂತಸ್ತಿನ ಕಟ್ಟಡ, ₹75 ಲಕ್ಷ ನಗದು, 100 ಗ್ರಾಂ ಚಿನ್ನ ಮತ್ತು ಒಂದು ಕಾರು ಪತ್ತೆಯಾಗಿವೆ’ ಎಂದು ವಿಚಕ್ಷಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.</p>.<p>‘ಕಂದಾಯ ಅಧಿಕಾರಿಯಾದ ಇವರು 1995ರಲ್ಲಿ ಕಟಕ್ನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪ್ರಯೋಗಾಲಯ ಸಹಾಯಕರಾಗಿ ಕೆಲಸಕ್ಕೆ ಸೇರಿದ್ದರು. ಪುನರ್ವಸತಿ ಯೋಜನೆಯಡಿ ಮಾಸಿಕ ₹2,000 ಆರಂಭಿಕ ವೇತನ ಪಡೆಯುತ್ತಿದ್ದರು’ ಎಂದು ತಿಳಿಸಿದ್ದಾರೆ.</p>.<p>ಅದೇ ರೀತಿ, ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ಕಿಯೋಂಜಾರ್ ಜಿಲ್ಲೆಯ ಆರು ಸ್ಥಳಗಳಲ್ಲಿ ಪಂಚಾಯತ್ ವಿಸ್ತರಣಾ ಅಧಿಕಾರಿಗಳ (ಪಿಇಒ) ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಘೋಷಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಆರೋಪದಡಿ ಹೆಚ್ಚುವರಿ ತಹಶೀಲ್ದಾರ್ ಬರಂಗ್ ಎಂಬವರಿಗೆ ಸೇರಿದ ಸ್ಥಳಗಳ ಮೇಲೆ ಒಡಿಶಾ ವಿಚಕ್ಷಣ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ₹75 ಲಕ್ಷ ನಗದು, ಮೂರು ಕಟ್ಟಡಗಳು, ಒಂದು ಫ್ಲಾಟ್ ಮತ್ತು ನಾಲ್ಕು ನಿವೇಶನಗಳು ಸೇರಿದಂತೆ ಅನೇಕ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.</p>.<p>‘ಭುವನೇಶ್ವರದಲ್ಲಿ 2–3 ಅಂತಸ್ತಿನ ಕಟ್ಟಡಗಳು, ಒಂದು ಫ್ಲಾಟ್, ಖುರ್ದಾದಲ್ಲಿ ಎರಡು ಅಂತಸ್ತಿನ ಕಟ್ಟಡ, ₹75 ಲಕ್ಷ ನಗದು, 100 ಗ್ರಾಂ ಚಿನ್ನ ಮತ್ತು ಒಂದು ಕಾರು ಪತ್ತೆಯಾಗಿವೆ’ ಎಂದು ವಿಚಕ್ಷಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.</p>.<p>‘ಕಂದಾಯ ಅಧಿಕಾರಿಯಾದ ಇವರು 1995ರಲ್ಲಿ ಕಟಕ್ನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪ್ರಯೋಗಾಲಯ ಸಹಾಯಕರಾಗಿ ಕೆಲಸಕ್ಕೆ ಸೇರಿದ್ದರು. ಪುನರ್ವಸತಿ ಯೋಜನೆಯಡಿ ಮಾಸಿಕ ₹2,000 ಆರಂಭಿಕ ವೇತನ ಪಡೆಯುತ್ತಿದ್ದರು’ ಎಂದು ತಿಳಿಸಿದ್ದಾರೆ.</p>.<p>ಅದೇ ರೀತಿ, ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ಕಿಯೋಂಜಾರ್ ಜಿಲ್ಲೆಯ ಆರು ಸ್ಥಳಗಳಲ್ಲಿ ಪಂಚಾಯತ್ ವಿಸ್ತರಣಾ ಅಧಿಕಾರಿಗಳ (ಪಿಇಒ) ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>