<p><strong>ಭುವನೇಶ್ವರ</strong>: ಗಾಂಜಾ ಹೊಂದಿದ್ದ ಆರೋಪದ ಮೇಲೆ ಭಾರತೀಯ ಮೀಸಲು ಬೆಟಾಲಿಯನ್ (ಐಆರ್ಬಿಎನ್)ನ ಮೂವರು ಯೋಧರನ್ನು ಬಂಧಿಸಲಾಗಿದ್ದು, ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಐಆರ್ಬಿಎನ್ನ 5ನೇ ಬೆಟಾಲಿಯನ್ನ ಕುನಾಲ್ ಸಿಂಗ್, ತ್ರಿಲೋಚನ್ ರಾಣಾ ಮತ್ತು ನಿಲಂ ಬಾರ್ಲಾ ಸೇವೆಯಿಂದ ವಜಾಗೊಂಡ ಯೋಧರು. ಅವರಿಂದ 15 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಮಾರ್ಚ್ 25ರಂದು ಬೌಧ್ ಜಿಲ್ಲೆಯ ಯೋಧರ ಬ್ಯಾರಕ್ಗಳ ಮೇಲೆ ಒಡಿಶಾ ಪೊಲೀಸರು ದಾಳಿ ನಡೆಸಿದರು. ಶೋಧ ಕಾರ್ಯಾಚರಣೆ ವೇಳೆ ಕುನಾಲ್ ಸಿಂಗ್ ಬಳಿ 5 ಕೆ.ಜಿ, ತ್ರಿಲೋಚನ್ ರಾಣಾ ಮತ್ತು ನೀಲಂ ಬಾರ್ಲಾ ಹತ್ತಿರ ಕ್ರಮವಾಗಿ 7 ಕೆ.ಜಿ ಮತ್ತು 3 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಮನಮುಂಡ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಮೂವರು ಐಆರ್ಬಿ ಯೋಧರನ್ನು ಕೆಲವು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಈಗ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ’ ಎಂದು ಬೌಧ್ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗೋಯೆಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಗಾಂಜಾ ಹೊಂದಿದ್ದ ಆರೋಪದ ಮೇಲೆ ಭಾರತೀಯ ಮೀಸಲು ಬೆಟಾಲಿಯನ್ (ಐಆರ್ಬಿಎನ್)ನ ಮೂವರು ಯೋಧರನ್ನು ಬಂಧಿಸಲಾಗಿದ್ದು, ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಐಆರ್ಬಿಎನ್ನ 5ನೇ ಬೆಟಾಲಿಯನ್ನ ಕುನಾಲ್ ಸಿಂಗ್, ತ್ರಿಲೋಚನ್ ರಾಣಾ ಮತ್ತು ನಿಲಂ ಬಾರ್ಲಾ ಸೇವೆಯಿಂದ ವಜಾಗೊಂಡ ಯೋಧರು. ಅವರಿಂದ 15 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಮಾರ್ಚ್ 25ರಂದು ಬೌಧ್ ಜಿಲ್ಲೆಯ ಯೋಧರ ಬ್ಯಾರಕ್ಗಳ ಮೇಲೆ ಒಡಿಶಾ ಪೊಲೀಸರು ದಾಳಿ ನಡೆಸಿದರು. ಶೋಧ ಕಾರ್ಯಾಚರಣೆ ವೇಳೆ ಕುನಾಲ್ ಸಿಂಗ್ ಬಳಿ 5 ಕೆ.ಜಿ, ತ್ರಿಲೋಚನ್ ರಾಣಾ ಮತ್ತು ನೀಲಂ ಬಾರ್ಲಾ ಹತ್ತಿರ ಕ್ರಮವಾಗಿ 7 ಕೆ.ಜಿ ಮತ್ತು 3 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>‘ಮನಮುಂಡ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಮೂವರು ಐಆರ್ಬಿ ಯೋಧರನ್ನು ಕೆಲವು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಈಗ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ’ ಎಂದು ಬೌಧ್ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗೋಯೆಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>