<p><strong>ಭುವನೇಶ್ವರ:</strong> ಚಂಡಮಾರುತ, ಗುಡುಗು ಸಹಿತ ಮಳೆ ಕುರಿತು ಸಂಶೋಧನೆ ನಡೆಸಲು ದೇಶದಲ್ಲಿಯೇ ಮೊಟ್ಟಮೊದಲ ಸುಸಜ್ಜಿತ ಪ್ರಯೋಗಾಲಯವನ್ನು ಒಡಿಶಾದ ಬಾಲಸೋರ್ನಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಥಾಪಿಸಲಿದೆ.</p>.<p>ಚಂಡಮಾರುತ, ಸಿಡಿಲಿನಂಥ ಪ್ರಕೃತಿ ವಿಕೋಪಗಳಿಂದ ಪ್ರಾಣ ಹಾಗೂ ಆಸ್ತಿಗಳಿಗೆ ಆಗುವ ಹಾನಿಯನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಶೋಧನೆ ನಡೆಸುವುದು ಈ ಪ್ರಯೋಗಾಲಯದ ಉದ್ದೇಶ ಎಂದು ಐಎಂಡಿ ಮಹಾ ನಿರ್ದೇಶಕ ಡಾ.ಮೃತ್ಯುಂಜಯ ಮಹಾಪಾತ್ರ ತಿಳಿಸಿದರು.</p>.<p><strong>ಓದಿ:</strong><a href="https://www.prajavani.net/india-news/what-is-there-in-the-toolkit-which-was-shared-by-greta-thunberg-802546.html" itemprop="url">‘ಗ್ರೇಟಾ’ ಹಂಚಿಕೊಂಡ ಟೂಲ್ ಕಿಟ್ನಲ್ಲೇನಿದೆ? ವಿವಾದವಾಗಿದ್ದೇಕೆ? ಇಲ್ಲಿದೆ ಮಾಹಿತಿ</a></p>.<p>ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾಹಿತಿ ನೀಡಿದರು. ಭೂವಿಜ್ಞಾನ ಸಚಿವಾಲಯ, ಐಎಂಡಿ, ಡಿಆರ್ಡಿಒ ಹಾಗೂ ಇಸ್ರೊ ಸಹಯೋಗದಲ್ಲಿ ಬಾಲಸೋರ್ನಲ್ಲಿ ಚಂಡಮಾರುತ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು. ಭೋಪಾಲ್ ಸಮೀಪ ಸಹ ಇಂಥದೇ ಪ್ರಯೋಗಾಲಯವನ್ನು ಸ್ಥಾಪಿಸುವ ಯೋಜನೆ ಇದೆ ಎಂದೂ ಹೇಳಿದರು.</p>.<p>ಭಾರತ ಉಪಖಂಡಕ್ಕೆ ಅಪ್ಪಳಿಸುವ ಚಂಡಮಾರುತಗಳ ಕುರಿತು ಡಾ.ಮಹಾಪಾತ್ರ ಅವರು ನಿಖರವಾದ ಮುನ್ಸೂಚನೆ ನೀಡುವಷ್ಟು ಪರಿಣತಿ ಹೊಂದಿದ್ದಾರೆ. ಹೀಗಾಗಿ ಅವರನ್ನು ‘ಸೈಕ್ಲೋನ್ ಮ್ಯಾನ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಚಂಡಮಾರುತ, ಗುಡುಗು ಸಹಿತ ಮಳೆ ಕುರಿತು ಸಂಶೋಧನೆ ನಡೆಸಲು ದೇಶದಲ್ಲಿಯೇ ಮೊಟ್ಟಮೊದಲ ಸುಸಜ್ಜಿತ ಪ್ರಯೋಗಾಲಯವನ್ನು ಒಡಿಶಾದ ಬಾಲಸೋರ್ನಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸ್ಥಾಪಿಸಲಿದೆ.</p>.<p>ಚಂಡಮಾರುತ, ಸಿಡಿಲಿನಂಥ ಪ್ರಕೃತಿ ವಿಕೋಪಗಳಿಂದ ಪ್ರಾಣ ಹಾಗೂ ಆಸ್ತಿಗಳಿಗೆ ಆಗುವ ಹಾನಿಯನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಶೋಧನೆ ನಡೆಸುವುದು ಈ ಪ್ರಯೋಗಾಲಯದ ಉದ್ದೇಶ ಎಂದು ಐಎಂಡಿ ಮಹಾ ನಿರ್ದೇಶಕ ಡಾ.ಮೃತ್ಯುಂಜಯ ಮಹಾಪಾತ್ರ ತಿಳಿಸಿದರು.</p>.<p><strong>ಓದಿ:</strong><a href="https://www.prajavani.net/india-news/what-is-there-in-the-toolkit-which-was-shared-by-greta-thunberg-802546.html" itemprop="url">‘ಗ್ರೇಟಾ’ ಹಂಚಿಕೊಂಡ ಟೂಲ್ ಕಿಟ್ನಲ್ಲೇನಿದೆ? ವಿವಾದವಾಗಿದ್ದೇಕೆ? ಇಲ್ಲಿದೆ ಮಾಹಿತಿ</a></p>.<p>ಖಾಸಗಿ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾಹಿತಿ ನೀಡಿದರು. ಭೂವಿಜ್ಞಾನ ಸಚಿವಾಲಯ, ಐಎಂಡಿ, ಡಿಆರ್ಡಿಒ ಹಾಗೂ ಇಸ್ರೊ ಸಹಯೋಗದಲ್ಲಿ ಬಾಲಸೋರ್ನಲ್ಲಿ ಚಂಡಮಾರುತ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು. ಭೋಪಾಲ್ ಸಮೀಪ ಸಹ ಇಂಥದೇ ಪ್ರಯೋಗಾಲಯವನ್ನು ಸ್ಥಾಪಿಸುವ ಯೋಜನೆ ಇದೆ ಎಂದೂ ಹೇಳಿದರು.</p>.<p>ಭಾರತ ಉಪಖಂಡಕ್ಕೆ ಅಪ್ಪಳಿಸುವ ಚಂಡಮಾರುತಗಳ ಕುರಿತು ಡಾ.ಮಹಾಪಾತ್ರ ಅವರು ನಿಖರವಾದ ಮುನ್ಸೂಚನೆ ನೀಡುವಷ್ಟು ಪರಿಣತಿ ಹೊಂದಿದ್ದಾರೆ. ಹೀಗಾಗಿ ಅವರನ್ನು ‘ಸೈಕ್ಲೋನ್ ಮ್ಯಾನ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>