<p><strong>ನವದೆಹಲಿ</strong>: ನಮಾಮಿ ಗಂಗಾ ಕಾರ್ಯಕ್ರಮದಡಿ ₹38,438 ಕೋಟಿ ವೆಚ್ಚದಲ್ಲಿ ಕೈಗೊಂಡ 457 ಯೋಜನೆಗಳ ಪೈಕಿ 2023ರ, ಡಿಸೆಂಬರ್ 31ರ ಹೊತ್ತಿಗೆ 280 ಯೋಜನೆಗಳು ಪೂರ್ಣಗೊಂಡಿವೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಗುರುವಾರ ತಿಳಿಸಿದೆ.</p><p>ಶುದ್ಧೀಕರಿಸದ ಜನವಸತಿ ಪ್ರದೇಶದ ಮತ್ತು ಕಾರ್ಖಾನೆಗಳ ಕಲುಷಿತ ನೀರು ನದಿಗೆ ತಲುಪುವುದನ್ನು ತಡೆಯಲು ಒಳಚರಂಡಿ ನಿರ್ವಹಣಾ ಮೂಲಸೌಕರ್ಯವನ್ನು ಸ್ಥಾಪಿಸುವುದು ಇದರ ಉದ್ದೇಶವಾಗಿದೆ ಎಂದು ಕೇಂದ್ರ ಜಲ ಶಕ್ತಿ ಖಾತೆಯ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿದ್ದಾರೆ.</p><p>ನಿತ್ಯ 6,208.12 ಮಿಲಿಯನ್ ಲೀಟರ್(MLD) ನೀರು ಸಂಸ್ಕರಣಾ ಘಟಕದ(ಎಸ್ಟಿಪಿ) ರಚನೆ ಮತ್ತು ಪುನರ್ವಸತಿಗಾಗಿ ₹31,575 ಕೋಟಿ ವೆಚ್ಚದಲ್ಲಿ 198 ಒಳಚರಂಡಿ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ, 111 ಒಳಚರಂಡಿ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ. ಇದರ ಪರಿಣಾಮವಾಗಿ 2,844 ಎಂಎಲ್ಡಿ ಒಳಚರಂಡಿ ನೀರು ಸಂಸ್ಕರಣಾ ಸಾಮರ್ಥ್ಯದ ಘಟಕ ಸೃಷ್ಟಿ ಮತ್ತು ಪುನರ್ವಸತಿಯಾಗಿದೆ ಎಂದು ಅವರು ಹೇಳಿದ್ದಾರೆ.</p><p>ನಮಾಮಿ ಗಂಗಾ ಕಾರ್ಯಕ್ರಮದಡಿ ರಾಷ್ಟ್ರೀಯ ಸ್ವಚ್ಛ ಗಂಗಾ ಮಿಷನ್ಗೆ (ಎನ್ಎಂಸಿಜಿ) 2014-15ರಲ್ಲಿ ಯೋಜನೆ ಆರಂಭವಾದಾಗಿನಿಂದ 2022–23ರವರೆಗೆ ಕೇಂದ್ರ ಸರ್ಕಾರವು ₹14,329 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಈವರೆಗೆ ಎನ್ಎಂಸಿಜಿ ₹13,735 ಕೊಟಿ ಹಣವನ್ನು ಬಿಡುಗಡೆ ಮಾಡಿದ್ದು, ಅದನ್ನು ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಗಂಗಾ ನದಿ ಮತ್ತು ಅದರ ಉಪನದಿಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ನಮಾಮಿ ಗಂಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಮಾಮಿ ಗಂಗಾ ಕಾರ್ಯಕ್ರಮದಡಿ ₹38,438 ಕೋಟಿ ವೆಚ್ಚದಲ್ಲಿ ಕೈಗೊಂಡ 457 ಯೋಜನೆಗಳ ಪೈಕಿ 2023ರ, ಡಿಸೆಂಬರ್ 31ರ ಹೊತ್ತಿಗೆ 280 ಯೋಜನೆಗಳು ಪೂರ್ಣಗೊಂಡಿವೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಗುರುವಾರ ತಿಳಿಸಿದೆ.</p><p>ಶುದ್ಧೀಕರಿಸದ ಜನವಸತಿ ಪ್ರದೇಶದ ಮತ್ತು ಕಾರ್ಖಾನೆಗಳ ಕಲುಷಿತ ನೀರು ನದಿಗೆ ತಲುಪುವುದನ್ನು ತಡೆಯಲು ಒಳಚರಂಡಿ ನಿರ್ವಹಣಾ ಮೂಲಸೌಕರ್ಯವನ್ನು ಸ್ಥಾಪಿಸುವುದು ಇದರ ಉದ್ದೇಶವಾಗಿದೆ ಎಂದು ಕೇಂದ್ರ ಜಲ ಶಕ್ತಿ ಖಾತೆಯ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿದ್ದಾರೆ.</p><p>ನಿತ್ಯ 6,208.12 ಮಿಲಿಯನ್ ಲೀಟರ್(MLD) ನೀರು ಸಂಸ್ಕರಣಾ ಘಟಕದ(ಎಸ್ಟಿಪಿ) ರಚನೆ ಮತ್ತು ಪುನರ್ವಸತಿಗಾಗಿ ₹31,575 ಕೋಟಿ ವೆಚ್ಚದಲ್ಲಿ 198 ಒಳಚರಂಡಿ ಮೂಲಸೌಕರ್ಯ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ, 111 ಒಳಚರಂಡಿ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ. ಇದರ ಪರಿಣಾಮವಾಗಿ 2,844 ಎಂಎಲ್ಡಿ ಒಳಚರಂಡಿ ನೀರು ಸಂಸ್ಕರಣಾ ಸಾಮರ್ಥ್ಯದ ಘಟಕ ಸೃಷ್ಟಿ ಮತ್ತು ಪುನರ್ವಸತಿಯಾಗಿದೆ ಎಂದು ಅವರು ಹೇಳಿದ್ದಾರೆ.</p><p>ನಮಾಮಿ ಗಂಗಾ ಕಾರ್ಯಕ್ರಮದಡಿ ರಾಷ್ಟ್ರೀಯ ಸ್ವಚ್ಛ ಗಂಗಾ ಮಿಷನ್ಗೆ (ಎನ್ಎಂಸಿಜಿ) 2014-15ರಲ್ಲಿ ಯೋಜನೆ ಆರಂಭವಾದಾಗಿನಿಂದ 2022–23ರವರೆಗೆ ಕೇಂದ್ರ ಸರ್ಕಾರವು ₹14,329 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಈವರೆಗೆ ಎನ್ಎಂಸಿಜಿ ₹13,735 ಕೊಟಿ ಹಣವನ್ನು ಬಿಡುಗಡೆ ಮಾಡಿದ್ದು, ಅದನ್ನು ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p><p>ಗಂಗಾ ನದಿ ಮತ್ತು ಅದರ ಉಪನದಿಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ನಮಾಮಿ ಗಂಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>