ನವದೆಹಲಿ: ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ಮುಖಂಡನ ಹತ್ಯೆ ಯತ್ನ ಪ್ರಕರಣದ ಸಂಚಿನಲ್ಲಿ ವಂಚಕ ಅಧಿಕಾರಿಯೊಬ್ಬರು ಶಾಮೀಲಾಗಿದ್ದಾರೆ ಎಂದು ಭಾರತದಲ್ಲಿ ನಡೆಸಿದ ತನಿಖೆಯಲ್ಲಿ ಪತ್ತೆಯಾಗಿರುವುದಾಗಿ ‘ಬ್ಲೂಮ್ ಬರ್ಗ್ ನ್ಯೂಸ್’ ಬುಧವಾರ ವರದಿ ಮಾಡಿದೆ.
ಆದರೆ, ಈ ವಿಚಾರವನ್ನು ಸರ್ಕಾರ ದೃಢಪಡಿಸಿಲ್ಲ ಎಂದೂ ಉಲ್ಲೇಖಿಸಿದೆ.
ಭಾರತ ಸರ್ಕಾರದ ಉದ್ಯೋಗಿಯೊಬ್ಬರು ಈ ಸಂಚಿನಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಆದರೆ, ಅವರು ಭಾರತದ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದಲ್ಲಿ (ರಾ) ಕೆಲಸ ನಿರ್ವಹಿಸುತ್ತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ