ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ್‍ಯಾಗಿಂಗ್‌: ರಾಜ್ಯಪಾಲರಿಂದ ಜಾದವ್‌ಪುರ ವಿ.ವಿ ಪರಿಸ್ಥಿತಿ ಪರಾಮರ್ಶೆ

Published 24 ಆಗಸ್ಟ್ 2023, 16:26 IST
Last Updated 24 ಆಗಸ್ಟ್ 2023, 16:26 IST
ಅಕ್ಷರ ಗಾತ್ರ

ಕೋಲ್ಕತ್ತ: ರ್‍ಯಾಗಿಂಗ್‌ ಮತ್ತು ಲೈಂಗಿಕ ಕಿರುಕುಳಕ್ಕೆ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬರು ಬಲಿಯಾದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್‌ ಗುರುವಾರ ತುರ್ತಾಗಿ ಪರಿಸ್ಥಿತಿ ಅವಲೋಕನ ಸಭೆ ನಡೆಸಿದರು. ಈ ಸಭೆಗೆ ವಿವಿಯ ನೂತನ ಉಪ ಕುಲಪತಿ ಬುದ್ಧದೇಬ್‌ ಸೌ ಹಾಜರಾದರು.    

ರಾಜಭವನದಲ್ಲಿ ನಿಗದಿಯಾಗಿದ್ದ ಸಭೆಯಲ್ಲಿ ಬುದ್ಧದೇಬ್‌ ಅವರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆ ಕುರಿತು ವಿವರಿಸಿದ್ದಾರೆ. 

ಸಹಪಾಠಿಗಳ ಕಿರುಕುಳ, ಲೈಂಗಿಕ ದೌರ್ಜನ್ಯದಿಂದ ಬೇಸತ್ತ 17 ವರ್ಷದ ಪದವಿ ಪೂರ್ವ ವಿದ್ಯಾರ್ಥಿಯೊಬ್ಬರು ಈ ತಿಂಗಳ 9ರಂದು ವಿ.ವಿಯ ಬಾಲಕರ ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದರು.  

ಸಂತ್ರಸ್ತ ವಿದ್ಯಾರ್ಥಿಯ ಬಟ್ಟೆ ಕಳಚಿ ಹಾಸ್ಟೆಲ್‌ ಅವರಣದಲ್ಲಿ ಮೆರವಣಿಗೆ ಮಾಡಲಾಗಿತ್ತು. ಕಿರುಕುಳ ತಪ್ಪಿಸಿಕೊಳ್ಳಲು ವಿದ್ಯಾರ್ಥಿಯು ಕೊಠಡಿಯಿಂದ ಕೊಠಡಿಗೆ ಅಡ್ಡಾಡಿದ್ದರು ಎಂದು ಪೊಲೀಸ್‌ ತನಿಖೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ. ಈ ಪ್ರಕರಣ ರ್‍ಯಾಗಿಂಗ್‌ ಪಿಡುಗಿನ ಕುರಿತು ಪಶ್ಚಿಮ ಬಂಗಾಳದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ.  

‌ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳೂ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT