<p><strong>ನವದೆಹಲಿ</strong>: ರಷ್ಯಾದಿಂದ ಭಾರತದ ರಿಫೈನರಿಗಳು ತೈಲ ಖರೀದಿ ಮಾಡುವುದಕ್ಕಾಗಿ ಅಮೆರಿಕ ನಿರ್ಬಂಧ ಸಡಿಲಿಸಿರುವ ಕ್ರಮವು ಪ್ರಧಾನಿ ನರೇಂದ್ರ ಮೋದಿ ಅವರ ‘ರಕ್ಷಣಾತ್ಮಕ ತೈಲ ರಾಜತಾಂತ್ರಿಕತೆ’ಗೆ ದೊರೆತ ಯಶಸ್ಸು ಎಂದು ಬಿಜೆಪಿ ಶುಕ್ರವಾರ ಹೇಳಿದೆ.</p>.<p>‘ದೇಶದಲ್ಲಿ ತೈಲದ ಕೊರತೆ ಇದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ಸುದ್ದಿ ಹಬ್ಬಿಸಿ, ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ರಾಜತಾಂತ್ರಿಕತೆಗೆ ಸಿಕ್ಕ ಯಶಸ್ಸು ಸಿಕ್ಕಿದೆ. ಈ ಕಾರಣಕ್ಕೆ, ‘ಭಾರತ ವಿರೋಧಿ ಧೋರಣೆ’ ಅನುಸರಿಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ತಂತ್ರಗಾರಿಕೆ ವಿಚಾರದಲ್ಲಿಯೂ ಸ್ಪಷ್ಟತೆ ಹೊಂದಿದೆ. ಇದನ್ನು ಸಹಿಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್, ಕೇಂದ್ರದ ನಡೆಯನ್ನು ದ್ವೇಷಿಸುತ್ತಿದ್ದಾರೆ’ ಎಂದು ಭಂಡಾರಿ ಕುಟುಕಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಷ್ಯಾದಿಂದ ಭಾರತದ ರಿಫೈನರಿಗಳು ತೈಲ ಖರೀದಿ ಮಾಡುವುದಕ್ಕಾಗಿ ಅಮೆರಿಕ ನಿರ್ಬಂಧ ಸಡಿಲಿಸಿರುವ ಕ್ರಮವು ಪ್ರಧಾನಿ ನರೇಂದ್ರ ಮೋದಿ ಅವರ ‘ರಕ್ಷಣಾತ್ಮಕ ತೈಲ ರಾಜತಾಂತ್ರಿಕತೆ’ಗೆ ದೊರೆತ ಯಶಸ್ಸು ಎಂದು ಬಿಜೆಪಿ ಶುಕ್ರವಾರ ಹೇಳಿದೆ.</p>.<p>‘ದೇಶದಲ್ಲಿ ತೈಲದ ಕೊರತೆ ಇದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಳ್ಳು ಸುದ್ದಿ ಹಬ್ಬಿಸಿ, ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ರಾಜತಾಂತ್ರಿಕತೆಗೆ ಸಿಕ್ಕ ಯಶಸ್ಸು ಸಿಕ್ಕಿದೆ. ಈ ಕಾರಣಕ್ಕೆ, ‘ಭಾರತ ವಿರೋಧಿ ಧೋರಣೆ’ ಅನುಸರಿಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.<p>‘ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ತಂತ್ರಗಾರಿಕೆ ವಿಚಾರದಲ್ಲಿಯೂ ಸ್ಪಷ್ಟತೆ ಹೊಂದಿದೆ. ಇದನ್ನು ಸಹಿಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್, ಕೇಂದ್ರದ ನಡೆಯನ್ನು ದ್ವೇಷಿಸುತ್ತಿದ್ದಾರೆ’ ಎಂದು ಭಂಡಾರಿ ಕುಟುಕಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>