ಜೈಪುರದಿಂದ ಬರುತ್ತಿದ್ದ ತೈಲ ಟ್ಯಾಂಕರ್, ರಸ್ತೆಯ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಕಾರಿಗೆ ಗುದ್ದಿದೆ. ಕಾರಿನೊಳಗಿದ್ದ ಸಿಎನ್ಜಿ ಸಿಲಿಂಡರ್ಗಳಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸುಟ್ಟು ಹೋಗಿದ್ದಾರೆ. ಕಾರಿನಲ್ಲಿದ್ದವರು ಜೈಪುರಕ್ಕೆ ತೆರಳುತ್ತಿದ್ದರು ಎಂದು ಬಿಲಾಸ್ಪುರ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ.
ಕಾರಿಗೆ ಡಿಕ್ಕಿ ಹೊಡೆದ ನಂತರ ತೈಲ ಟ್ಯಾಂಕರ್, ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದಿದ್ದು, ವ್ಯಾನ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ತೈಲ ಟ್ಯಾಂಕರ್ನ ಚಾಲಕ ಪರಾರಿಯಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತನಿಖಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ